ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮೂಡಲಗಿ: ‘ಕೊರೊನಾ ಸೋಂಕು ಹರಡದಂತೆ ಸಮಾಜದ ಎಲ್ಲ ಜನರು ಬದ್ದರಾಗಿರಬೇಕು. ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು …
Read More »Daily Archives: ಏಪ್ರಿಲ್ 22, 2020
ಶಿವಬೋಧರಂಗ ಮಠಕ್ಕೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ
ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿಗಳ ಕುಟಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು. ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, …
Read More »ಕುಲಗೋಡ ಕರೋನಾ ವಾರಿಯರ್ಸ ಗೆ ಪುಷ್ಪವೃಷ್ಠಿ
ಕುಲಗೋಡ ಕರೋನಾ ವಾರಿಯರ್ಸ ಗೆ ಪುಷ್ಪವೃಷ್ಠಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕರೋನಾ ವಾರಿಯರ್ಸಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಆರತಿ ಮಾಡಿ,ಹೂ ಗುಚ್ಚ ನೀಡಿ, ಕರೋನಾ ಜಾಗೃತಿ ಪಥ ಸಂಚಲನ ಕಾರ್ಯಕ್ರಮಕ್ಕೆ ಗ್ರಾಮದ ಜನತೆ ಹೂ ಮಳೆ ಸೂರಿಸಿ ಅಭಿನಂದನೆ ಸಲ್ಲಿಸಿದರು. ಗ್ರಾಮದಲ್ಲಿ ಕೊರೊನಾ ಸೊಂಕು ತಡೆಗಟ್ಟಲು ಹಗಲಿರುಳು ಶ್ರಮಿಸುತ್ತಿರುವ ಪೋಲಿಸ್, ಆರೋಗ್ಯ ಇಲಾಖೆ, ಅಂಗನವಾಡಿ, ಆಶಾಕಾರ್ಯಕರ್ತರು ಹಾಗೂ ಹೆಸ್ಕಾಂ ಸಿಬ್ಬಂದಿಗೆ ಮಂಗಳವಾರ ಸಂಜೆ ಪುಷ್ಪವೃಷ್ಠಿಗರೆದು ಗ್ರಾಮಸ್ಥರು ಧನ್ಯತೆಯನ್ನು ಸಲ್ಲಿಸಿದರು. …
Read More »ರಾಜ್ಯದಲ್ಲಿ ಸಂಜೆ ಎರಡು ಪ್ರಕರಣಗಳು ಬೆಳಕಿಗೆ …
ಬೆಳಗಾವಿಯಲ್ಲಿಂದು ಹೊಸ ಪ್ರಕರಣ ಇಲ್ಲ; ರಾಜ್ಯದಲ್ಲಿ ಸಂಜೆ ಎರಡು ಪ್ರಕರಣಗಳು ಬೆಳಕಿಗೆ … ಬುಧವಾರ ಸಂಜೆಯ ಕರ್ನಾಟಕ ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಯಾರಿಗೂ ಸೋಂಕಿತರಿರುವುದು ಧೃಡಪಟ್ಟಿಲ್ಲ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ427 ಕ್ಕೆ ಏರಿದೆ. ಮೈಸೂರು- ೨ ನಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮೈಸೂರು ಪ್ರಕರಣಗಳು ೮೮ ಕ್ಕೆ ಏರಿವೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 43 ಕೊರೋನಾ ಸೋಂಕು ತಗುಲಿದವರಿದ್ದು, ಇವರೆಲ್ಲರೂ …
Read More »ಕೊರೋನಾ ಸೋಂಕಿತರ ಸಂಖ್ಯೆ 7 ಹೆಚ್ಚಾಗಿದ್ದು, 425ಕ್ಕೇರಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಹೆಚ್ಚಾಗಿದ್ದು, 425ಕ್ಕೇರಿದೆ. ಇದೀಗ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ಕಲಬುರ್ಗಿಯಲ್ಲಿ 5 ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿ ಸೇರಿದಂತೆ ರಾಜ್ಯದ ಬೇರೆ ಯಾವುದೇ ಭಾಗದಲ್ಲಿ ಇಂದು ಸೋಂಕು ಪತ್ತೆಯಾಗಿಲ್ಲ. ಕಲಬುರ್ಗಿಯಲ್ಲಿ 4 ತಿಂಗಳ ಗಂಡು ಮಗುವಿಗೂ ಸೋಂಕು ಪತ್ತೆಯಾಗಿದೆ.
Read More »