Breaking News

Daily Archives: ಏಪ್ರಿಲ್ 27, 2020

ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದ ಭೀಮಪ್ಪ ಗಡಾದ

ಮೂಡಲಗಿ:  ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಪ್ರತಿ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್ ವಿತರಿಸಿದ ಕೆಎಂಎಫ್ ರಾಜ್ಯಾಧ್ಯಕ್ಷ ಹಾಗೂ ಅರಬಾಂವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಮಾಡಿರುವಂತ ಕಾರ್ಯ ಶ್ಲಾಘನೀಯ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು. ಸೋಮವಾರದಂದು ಪತ್ರಕರ್ತರ ಜೊತೆ ಮಾತನಾಡಿ, ಇವತ್ತು ದೇಶದಲ್ಲಿ ಕೊರೋನಾ ವೈರಸ್ ಬಂದು ಇಡೀ ನಮ್ಮ ದೇಶವನೇ ಅಲೋಲ ಕಲ್ಲೋಲ ಮಾಡುತ್ತಿರುವ ಹಿನ್ನೆಲೆ ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. …

Read More »

ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ವಿತರಿಸುತ್ತಿರುವುದು.

ಮೂಡಲಗಿ: ಲಾಕ್‍ಡೌನ್‍ದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದರಿಂದ ಅವರ ನೆರವಿಗೆ ಧಾವಿಸಿ ದಿನಬಳಕೆಯ ಅಗತ್ಯ ವಸ್ತುಗಳನ್ನು ಅವರವರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನತೆಯ ಅನ್ನದಾತರಾಗಿದ್ದಾರೆಂದು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಸೋಮವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. ಬಾಲಚಂದ್ರ ಜಾರಕಿಹೊಳಿ ಅವರು ಜನರ ಜೊತೆ ಅವಿನಾಭಾವ …

Read More »

ತಾಯಿ, ಮಗ ಸೇರಿ 8 ಜನರಿಗೆ ಇಂದು ಕೊರೋನಾ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಸೋಮವಾರ ಮದ್ಯಾಹ್ನ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಎಂದು   ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಪ್ರಕಟಿಸಿದೆ. ರಾಜ್ಯ ದಲ್ಲಿ ಕೊರೊನಾ ಪ್ರಕರಣ ಒಟ್ಟು 511ಕ್ಕೆ ಏರಿದೆ. ಒಂದೇ ದಿನ ಎಂಟು ಕೇಸ್ ಏರಿಕೆಯಾಗಿವೆ. ಮಂಗಳೂರಿನಲ್ಲಿ 80 ವರ್ಷದ ತಾಯಿ ಹಾಗೂ 45 ವರ್ಷದ ಮಗನಿಗೆ ಸೋಂಕು ತಗುಲಿದೆ. ಬಾಗಲಕೋಟೆ -ವಿಜಯಪುರದಲ್ಲಿ ತಲಾ ಎರಡು, ದಕ್ಷಿಣ ಕನ್ನಡ ಕನ್ನಡ ಎರಡು, ನಾಗಮಂಗಲ ಒಂದು, ಬೆಂಗಳೂರು ಒಂದು …

Read More »