ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »Daily Archives: ಮೇ 1, 2020
ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ.
ಬೆಳಗಾವಿ: ಬೆಳಗ್ಗೆ ಮೂರು ಕೊರೋನಾ ಪ್ರಕರಣ ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ. ಇದುವರೆಗೆ ಒಟ್ಟು 72 ಕೊರೋನ ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ನಿನ್ನೆ ಒಂದೇ ದಿನ 14 ಪ್ರಕರಣ ಧುತ್ತೆಂದು ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಕರೋನ ಮಹಾಮಾರಿ ಹಿರೇಬಾಗೇವಾಡಿ, ಕುಡಚಿ, ಸಂಕೇಶ್ವರ ಮುಂತಾದ ಪ್ರದೇಶಗಳಲ್ಲಿ ಜನತೆಯನ್ನು ಇನ್ನಿಲ್ಲದಂತೆ ಕಂಗೆಡಿಸಿದೆ.
Read More »ಗೇಣುದ್ದ ಹೊಲಕ್ಕಾಗಿ ದಾಯಾದಿ ಜಗಳ ಕೊಲೆಯಲ್ಲಿ ಪರ್ಯಾವಸನಗೊಂಡಿದೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತಾಮಣಿ ರಾಮಪ್ಪ ಮೇಟಿ ( 55) ಕೊಲೆಯಾದವರು. ಅವರ ಅಣ್ಣನ ಮಗ ಗೋಪಾಲ ಭೀಮಪ್ಪ ಮೇಟಿ – (35) ಆರೋಪಿ. ಬೆಳೆ ಸಂರಕ್ಷಣೆಗಾಗಿ ಲೈಸನ್ಸ್ ಪಡೆದಿದ್ದ ಬಂದೂಕಿನಿಂದ ಕೊಲೆಗೈಯಲ್ಲಾಗಿದೆ. ಎರಡು ನಳಿಕೆಯ ಬಂದೂಕಿನಿಂದ ನೇರವಾಗಿ ಎದೆಗೆ ಗುಂಡಿಕ್ಕಲಾಗಿದ್ದು, ಎರಡು ಗುಂಡುಗಳು ಎದೆಯೊಳಗೆ ತೂರಿ ಹೋಗಿದೆ. ಚಿಂತಾಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಗೋಕಾಕ ಸರಕಾರಿ ಆಸ್ಪತ್ರೆಗೆ ಒಯ್ದಾಗ …
Read More »ಬಾಲಚಂದ್ರ ಜಾರಕಿಹೊಳಿ ಅವರ ಪುಣ್ಯದ ಕೆಲಸದಲ್ಲಿ ನಾವೆಲ್ಲರೂ ಭಾಗಿಯಾಗೋಣ-ಮುರನಾಳ
ಮೂಡಲಗಿ: ಲಾಕ್ ಡೌನ್ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ಮುಂದೆ ಬಂದು ಅರಭಾಂವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೆ ದಿನ ನಿತ್ಯದ ಆಹಾರ ಧಾನ್ಯಗಳನ್ನು ನೀಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಾದರಿಯಾಗಿದೆ. ಇವರು ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಿಳಿಸಿದರು. ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದಲ್ಲಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »ಬೆಳಗಾವಿಯ 3 ಸೇರಿ ರಾಜ್ಯದಲ್ಲಿ ಇಂದು 11 ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಇವರಲ್ಲಿ ಮಂಡ್ಯದ 8 ಹಾಗೂ ಬೆಳಗಾವಿ ರಾಯಬಾಗದ ಮೂವರು ಸೇರಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೊಂಕಿತರ ಸಂಖ್ಯೆ 576ಕ್ಕೇರಿದೆ. ಬೆಳಗಾವಿಯಲ್ಲಿ 72ಕ್ಕೇರಿದೆ. ರಾಯಬಾಗದ ಮೂವರಿಗೆ ರೋಗಿ ನಂಬರ್ 301ರಿಂದ ಸೋಂಕು ತಗುಲಿದೆ.
Read More »