ಮೂಡಲಗಿ: ಬುಧವಾರದಂದು ನಿಧನರಾದ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರ ನಿಧನಕ್ಕೆ ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಹಕಾರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರಿಗೆ ಸೆ. 24 ಗುರುವಾರದಂದು ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಪ್ರಮುಖರಾದ ಬಸವರಾಜ ಕಡಾಡಿ ಮಾತನಾಡಿ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ, ಸರಳ ಸಜ್ಜನಿಕೆಯ ವ್ಯಕ್ತಿ, ಕೇಂದ್ರ ಸಚಿವರಾದ ನಮ್ಮ ಭಾಗದ ಸಂಸದರಾದ …
Read More »Yearly Archives: 2020
ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಬುಧವಾರ ರಾತ್ರಿ ದೆಹಲಿ ಎಮ್ಸ್ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆಯಲಾಯಿತು. ಕಳೆದ 25 ವರ್ಷಗಳಿಂದ ನಾನು ಅವರೊಂದಿಗೆ ಉತ್ತಮ ಒಡನಾಟ ಹೊಂದಿ, ಅತ್ಯಂತ ಆತ್ಮೀಯರು ಹಾಗೂ ಮಾರ್ಗದರ್ಶಕರಾಗಿದ್ದರು. ರಾಜ್ಯದಲ್ಲಿ …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭ್ರಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ …
Read More »ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡ ಬೆಳಗಾವಿ ಜನತೆ
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ನಿಧನರಾಗಿರುವ ಸುದ್ದಿಯನ್ನು ಸ್ಪಷ್ಟ ಪಡಿಸಿದ್ದಾರೆ. ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ, ಈ ಬಾರಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮ ಕಾರ್ಯ …
Read More »‘ಸಮಾಜದ ಸ್ವಾಸ್ಥ್ಯಕ್ಕೆ ಶಾಂತಿ, ಸಹಬಾಳ್ವೆ ಬೇಕು’- ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರ
‘ಸಮಾಜದ ಸ್ವಾಸ್ಥ್ಯಕ್ಕೆ ಶಾಂತಿ, ಸಹಬಾಳ್ವೆ ಬೇಕು’ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರ ನುಡಿ ಮೂಡಲಗಿ: ‘ಎಲ್ಲ ಧರ್ಮಗಳ ಸಾರ ಒಂದೇ ಆಗಿದ್ದು, ಸರ್ವ ಧರ್ಮಗಳನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಯೋಗೀಶ್ವರ ಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ …
Read More »ಕಾಂಗ್ರೇಸ ಪಕ್ಷದಲ್ಲಿ ಯಾವುದೆ ಬಿನ್ನಾಭಿಪ್ರಾಯವಿಲ್ಲ,ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ಚುನಾವಣೆ ಎದುರಿಸುತ್ತೇವೆ -ಲಕ್ಕಣ್ಣ ಸವಸುದ್ದಿ
ಕಾಂಗ್ರೇಸ ಪಕ್ಷದಲ್ಲಿ ಯಾವುದೆ ಬಿನ್ನಾಭಿಪ್ರಾಯವಿಲ್ಲ,ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ಚುನಾವಣೆ ಎದುರಿಸುತ್ತೇವೆ -ಲಕ್ಕಣ್ಣ ಸವಸುದ್ದಿ ಮೂಡಲಗಿ:- 2018ರ ವಿಧಾನಸಭೆ ಚುನಾವಣೆ ನಂತರ ಅರಭಾಂವಿ ಕ್ಷೇತ್ರದಲ್ಲಿ ಕಾಂಗ್ರೇಸ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮೂರು ಗುಂಪುಗಳಾಗಿವೆ ಎಂಬುವದು ಸುಳ್ಳು. ಎಲ್ಲರೂ ಒಗ್ಗಟ್ಟಾಗಿ ಮುಂಬರುವ ಜಿ.ಪಂ,ತಾ.ಪಂ ಮತ್ತು ಗ್ರಾ.ಪಂ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸಲು ಈಗಿನಿಂದಲೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಕ್ಕಣ್ಣ ಸವಸುದ್ದಿ ಹೇಳಿದರು. ಅವರು ಬುಧವಾರದಂದು ಗುರ್ಲಾಪೂರ ಪ್ರವಾಸಿ …
Read More »ಕೊರೊನಾದಿಂದ ಮುಕ್ತರಾಗಲು ಮನೆಮದ್ದು ಸೂಕ್ತ
ಕೊರೊನಾದಿಂದ ಮುಕ್ತರಾಗಲು ಮನೆಮದ್ದು ಸೂಕ್ತ ಮೂಡಲಗಿ: ‘ಕೊರೊನಾ ಸೋಂಕಿನಿಂದ ಮುಕ್ತರಾಗಲು ಮನೆಮದ್ದು ಸೂಕ್ತ ಪರಿಹಾರವಾಗಿದೆ’ ಎಂದು ಮೂಡಲಗಿ ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಹೇಳಿದರು. ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ನಡೆದ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ ಅರಿವು’ ಅಭಿಯಾನದ 5ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕಿನ ಬಗ್ಗೆ ಅಲಕ್ಷತೆ ಮಾಡಬಾರದು …
Read More »ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಶ್ರೀಪತಿ ಗಣೇಶವಾಡಿ ಅವಿರೋಧವಾಗಿ ಆಯ್ಕೆ ಗೋಕಾಕ : ಇಲ್ಲಿಯ ಎಪಿಎಂಸಿ ಅಧ್ಯಕ್ಷ ಶ್ರೀಪತಿ ಹಾಲಪ್ಪ ಗಣೇಶವಾಡಿ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆಯಬೇಕಾಗಿದ್ದ ಈ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಶ್ರೀಪತಿ ಗಣೇಶವಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂಲತಃ ಗೋಕಾಕ ತಾಲೂಕಿನ ಗಣೇಶವಾಡಿ ಗ್ರಾಮದವರಾದ ಗಣೇಶವಾಡಿ ಅವರು, ಗೋಕಾಕ ಎಪಿಎಂಸಿಗೆ ಮೊದಲ ಬಾರಿ …
Read More »1.28 ಕೋಟಿ ರೂ. ವೆಚ್ಚದ ಮೆಳವಂಕಿ ಶಾಲಾ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ
1.28 ಕೋಟಿ ರೂ. ವೆಚ್ಚದ ಮೆಳವಂಕಿ ಶಾಲಾ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ ಗೋಕಾಕ : ಇಲ್ಲಿಗೆ ಸಮೀಪದ ಮೆಳವಂಕಿಯ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಮೆಳವಂಕಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗಳ ನೂತನ ಕೊಠಡಿಗಳ ನಿರ್ಮಾಣಕ್ಕೆ 1.28 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸರ್ಕಾರಿ ಪ್ರೌಢ ಶಾಲೆಯ ನೂತನ ಐದು ಕೊಠಡಿಗಳಿಗೆ ನಬಾರ್ಡ …
Read More »‘ಆಧ್ಯಾತ್ಮಿಕ ಚಿಂತನೆ ಬದುಕುವ ಕಲೆ ಕಲಿಸುತ್ತದೆ’ – ಡಾ. ಎಸ್.ಎಸ್. ಪಾಟೀಲ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ದ 4ನೇ ದಿನದ ಕಾರ್ಯಕ್ರಮದಲ್ಲಿ ಸುರಕ್ಷಾ ಪ್ಯಾರಾ ಮೆಡಿಕಲ್ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಎಸ್. ಪಾಟೀಲ ಮಾತನಾಡಿದರು ಡಾ. ಎಸ್.ಎಸ್. ಪಾಟೀಲ ಅಭಿಪ್ರಾಯ ‘ಆಧ್ಯಾತ್ಮಿಕ ಚಿಂತನೆ ಬದುಕುವ ಕಲೆ ಕಲಿಸುತ್ತದೆ’ ಮೂಡಲಗಿ: ‘ಆಧ್ಯಾತ್ಮಿಕ ಚಿಂತನೆಗಳು ಮನುಷ್ಯನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಬದುಕುವ ಕಲೆಯನ್ನು ಕಲಿಸುತ್ತವೆ’ ಎಂದು ಸುರಕ್ಷಾ ಪ್ಯಾರಾ ಮೆಡಿಕಲ್ ಸಂಸ್ಥೆ ಅಧ್ಯಕ್ಷ ಡಾ. ಎಸ್.ಎಸ್. …
Read More »