ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ. ಇಂದು ಕುಂದಾನಗರಿಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿಲ್ಲ. ಇದರಿಂದ ಜನ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಹೌದು ರವಿವಾರ 12 ಗಂಟೆಯ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು. ರಾಜ್ಯದಲ್ಲಿ ಇಂದು ಹೊಸದಾಗಿ ಐದು ಕೊರೊನಾ ಪಾಸಿಟಿವ್ ಕೇಸ್ಗಳು ದೃಢಪಟ್ಟಿವೆ. ಕಲಬುರ್ಗಿಯಲ್ಲಿ ಮೂರು ಹಾಗೂ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಎರಡು ಕೊರೊನಾ ಸೋಂಕು ಕಾಣಿಸಿಕೊಂಡಿದ್ದು.
Read More »Yearly Archives: 2020
ವಯೋನಿವೃತ್ತಿ ಹೊಂದಿದ ಅರಳಿಮಟ್ಟಿ ಹೆಸ್ಕಾಂ ಶಾಖಾಧಿಕಾರಿ ಮಾರುತಿ ಬಾಗಿಮನಿ
ವಯೋನಿವೃತ್ತಿ ಹೊಂದಿದ ಮಾರುತಿ ಬಾಗಿಮನಿ ಕುಲಗೋಡ: ವಯೋನಿವೃತ್ತಿ ಹೊಂದಿದ ಅರಳಿಮಟ್ಟಿ ಹೆಸ್ಕಾಂ ಶಾಖಾಧಿಕಾರಿ ಮಾರುತಿ ಬಾಗಿಮನಿ ಇವರಿಗೆ ಅಧಿಕಾರಿಗಳು,ಸಿಬ್ಬಂದಿ ಹಾಗೂ ಗ್ರಾಮಸ್ಥರ ಪರವಾಗಿ ಶನಿವಾರ ಸಂಜೆ ಬೀಳ್ಕೋಡುವ ಸಮಾರಂಭ ಮಾರುತಿ ಬಾಗಿಮನಿ ಇವರ ಮನೆಯಲ್ಲಿ ನಡೆಯಿತು. ಮಾರುತಿ ಬಾಗಿಮನಿ ಇವರು ಹೆಸ್ಕಾಂ ನಲ್ಲಿ 1988 ಸೇವೆ ಪ್ರಾರಂಭಿಸಿದ್ದು ಕುಲಗೋಡ, ಕುಡಚಿ, ಯಲ್ಪಾರಟ್ಟಿ, ಅರಳಿಮಟ್ಟಿ. ಸೇರಿದಂತೆ ಹಲವೇಡೆ 34 ವರ್ಷ ಕರ್ತವ್ಯ ಮಾಡಿದ್ದು ಅರಳಿಮಟ್ಟಿ ಶಾಖೆಯಲ್ಲಿ 3 ವರ್ಷ ಸೇವೆ ಸಲ್ಲಿಸಿ …
Read More »ಪತ್ರಿಕೆ ವಿತರಕರ ಜೊತೆಗೆ ಹುಟ್ಟು ಹಬ್ಬ ಆಚರಣೆ
ಪತ್ರಿಕೆ ವಿತರಕರ ಜೊತೆಗೆ ಹುಟ್ಟು ಹಬ್ಬ ಆಚರಣೆ ಮೂಡಲಗಿ: ಇಲ್ಲಿಯ ಯುವ ವಕೀಲ ವಿನೋದ ಪಾಟೀಲ ತಮ್ಮ ಮಗ ಆರ್ಯನ್ನ 5ನೇ ಹುಟ್ಟುಹಬ್ಬವನ್ನು ದಿನಪತ್ರಿಕೆಗಳನ್ನು ವಿತರಿಸುವವರಿಗೆ ಉಪಹಾರದ ವ್ಯವಸ್ಥೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ವಿನೋದ ಮಾತನಾಡಿ ‘ಕೊರೊನಾದ ಆತಂಕ ಮತ್ತು ಲಾಕ್ಡೌನ್ ಪರಿಸ್ಥಿತಿಯಲ್ಲಿ ಸುದ್ದಿ ಪತ್ರಿಕೆಗಳನ್ನು ನಸುಕಿನಲ್ಲಿ ಮನೆಗಳಿಗೆ ತಲುಪಿಸುವ ವಿತರಣಾ ಕಾರ್ಯವು ಅನನ್ಯವಾಗಿದೆ. ಅವರಿಗೆ ಉಪಹಾರದ ವ್ಯವಸ್ಥೆ ಮಾಡುವುದು ನನ್ನ ಅಳಿಲು ಸೇವೆಯಾಗಿದೆ’ ಎಂದರು. …
Read More »ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಮೂಡಲಗಿಯ ಕೃಷಿ ಪರಿಕರ ಮಾರಾಟ ಮಳಿಗೆಗೆ ಬೇಟಿ ನೀಡಿದರು.
ಮೂಡಲಗಿ: ಮುಂಗಾರು ಹಂಗಾಮು ಮಳೆ ಬೇಗ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವ ಹಿನ್ನಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ಬೀಜ, ರಸಗೋಬ್ಬರ ಹಾಗೂ ಕೀಟನಾಶಕಗಳನ್ನು ಸರ್ಮಪಕವಾಗಿ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ನಿಗದಿತ ದರಕ್ಕೆ ಮುಟ್ಟುವಂತೆ ಏರ್ಪಾಟು ಮಾಡಿಕೊಳ್ಳಲು ಕೃಷಿ ಇಲಾಖೆಯ ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಅವರು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು. ಶನಿವಾರದಂದು ಘಟಪ್ರಭಾ, ರಾಜಾಪೂರ, ನಾಗನೂರ, ಹಾಗೂ ಮೂಡಲಗಿ ಪಟ್ಟಣ ಕೃಷಿ …
Read More »ಒಂದು ಕೋಟಿ ರೂಪಾಯಿ ಚೆಕ್ ಮುಖ್ಯಮಂತ್ರಿಗಳ ನಿಧಿಗೆ ಹಸ್ತಾಂತರ
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರ ಕೃಷ್ಣಾ ಕಚೇರಿಯಲ್ಲಿ ಬೆಳಗಾವಿಯ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂಪಾಯಿಗಳ ಚೆಕ್ನ್ನು ಮಾಜಿ ಸಚಿವರಾದ ಹಾಗೂ ಶಾಸಕರಾದ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಹನುಮಂತ ಕೊಟಬಾಗಿ ಹಾಗೂ ರಾಜೇಂದ್ರ ದೇಸಾಯಿ ನೇತೃತ್ವದಲ್ಲಿ ವಿತರಿಸಲಾಯಿತು.
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ,73 ಕ್ಕೇರಿದ ಸೊಂಕಿತರ ಸಂಖ್ಯೆ
ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ .
Read More »ಬಾಲಚಂದ್ರ ಜಾರಕಿಹೊಳಿ ಕಲಿಯುಗದ ಕರ್ಣ- ಬಸಗೌಡ ಪಾಟೀಲ
ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ.
ಬೆಳಗಾವಿ: ಬೆಳಗ್ಗೆ ಮೂರು ಕೊರೋನಾ ಪ್ರಕರಣ ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ. ಇದುವರೆಗೆ ಒಟ್ಟು 72 ಕೊರೋನ ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ನಿನ್ನೆ ಒಂದೇ ದಿನ 14 ಪ್ರಕರಣ ಧುತ್ತೆಂದು ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಕರೋನ ಮಹಾಮಾರಿ ಹಿರೇಬಾಗೇವಾಡಿ, ಕುಡಚಿ, ಸಂಕೇಶ್ವರ ಮುಂತಾದ ಪ್ರದೇಶಗಳಲ್ಲಿ ಜನತೆಯನ್ನು ಇನ್ನಿಲ್ಲದಂತೆ ಕಂಗೆಡಿಸಿದೆ.
Read More »ಗೇಣುದ್ದ ಹೊಲಕ್ಕಾಗಿ ದಾಯಾದಿ ಜಗಳ ಕೊಲೆಯಲ್ಲಿ ಪರ್ಯಾವಸನಗೊಂಡಿದೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತಾಮಣಿ ರಾಮಪ್ಪ ಮೇಟಿ ( 55) ಕೊಲೆಯಾದವರು. ಅವರ ಅಣ್ಣನ ಮಗ ಗೋಪಾಲ ಭೀಮಪ್ಪ ಮೇಟಿ – (35) ಆರೋಪಿ. ಬೆಳೆ ಸಂರಕ್ಷಣೆಗಾಗಿ ಲೈಸನ್ಸ್ ಪಡೆದಿದ್ದ ಬಂದೂಕಿನಿಂದ ಕೊಲೆಗೈಯಲ್ಲಾಗಿದೆ. ಎರಡು ನಳಿಕೆಯ ಬಂದೂಕಿನಿಂದ ನೇರವಾಗಿ ಎದೆಗೆ ಗುಂಡಿಕ್ಕಲಾಗಿದ್ದು, ಎರಡು ಗುಂಡುಗಳು ಎದೆಯೊಳಗೆ ತೂರಿ ಹೋಗಿದೆ. ಚಿಂತಾಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಗೋಕಾಕ ಸರಕಾರಿ ಆಸ್ಪತ್ರೆಗೆ ಒಯ್ದಾಗ …
Read More »ಬಾಲಚಂದ್ರ ಜಾರಕಿಹೊಳಿ ಅವರ ಪುಣ್ಯದ ಕೆಲಸದಲ್ಲಿ ನಾವೆಲ್ಲರೂ ಭಾಗಿಯಾಗೋಣ-ಮುರನಾಳ
ಮೂಡಲಗಿ: ಲಾಕ್ ಡೌನ್ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ಮುಂದೆ ಬಂದು ಅರಭಾಂವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೆ ದಿನ ನಿತ್ಯದ ಆಹಾರ ಧಾನ್ಯಗಳನ್ನು ನೀಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಾದರಿಯಾಗಿದೆ. ಇವರು ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಿಳಿಸಿದರು. ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದಲ್ಲಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »