ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ ‘ಮತ್ಸ್ಯ ಕೃಷಿ ತರಬೇತಿ’ ಕಾರ್ಯಕ್ರಮದ ಸಮಾರೋಪ ಮೂಡಲಗಿ: ಸೀ ಬಾಸ್ ಮೀನಿನ ತಳಿಯು ಉತ್ತಮ ಮಾರುಕಟ್ಟೆಯನ್ನು ಹೊಂದಿರುವ ತಳಿ. ಮೂಲತಃ ಕರಾವಳಿ ತೀರದಲ್ಲಿಕಂಡುಬರುವ ಈ ಮೀನು, ಸಿಹಿ ನೀರಿನಲ್ಲಿಯೂ ಬೆಳಯಬಲ್ಲದು. ಸೂಕ್ಷ್ಮ ತಳಿಯಾದ ಇದು ಉತ್ತಮ ನೀರಿನ ಗುಣಮಟ್ಟ ಕಾಯ್ದುಕೊಂಡು ಗುಣಮಟ್ಟದ ಆಹಾರ ನೀಡಿದಲ್ಲಿ 12 ತಿಂಗಳಲ್ಲಿ 1 ಕಿಲೋ ಬೆಳೆಯಬಲ್ಲ ಸಾಮಥ್ರ್ಯ ಹೊಂದಿದೆ ಹಾಗೂ ಮಾರುಕಟ್ಟೆಯಲ್ಲಿ ಪ್ರತಿ ಕಿಲೋ ಮೀನಿಗೆ ರೂ.450ರಷ್ಟು ದರ ಸಿಗಲಿದೆ …
Read More »Yearly Archives: 2020
ಮಹಾದೇವ ಪೋತರಾಜಗೆ ಪಿಎಚ್.ಡಿ. ಪದವಿ ಪ್ರಕಟ ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಗ್ರಾಮದ ಮಹಾದೇವ ಪೋತರಾಜ ಅವರು ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ಬೆಳಗಾವಿ ರಾಣಿ ಚನ್ನಮ್ಮ ವಿವಿಯ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ಮಹೇಶ ಗಾಜಪ್ಪನವರ ಅವರು ಸಂಶೋಧನೆಗೆ ಮಾರ್ಗದರ್ಶನ ನೀಡಿದ್ದರು. ಇದೇ ನ. 26ರಂದು ರಾಣಿ ಚನ್ನಮ್ಮ ವಿವಿಯ …
Read More »ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು
ಮೂಡಲಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು ಕೇಂದ್ರ-ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಹಾಕುತ್ತಾ ಮೆರವಣಿಗೆ ಮೂಲಕ ಪಟ್ಟಣದ ಶಿವಬೋದರಂಗ ಕಾಲೇಜದಿಂದ ತಾಪಂ ಹಾಗೂ ತಹಶೀಲ್ದಾರ ಕಚೇರಿಗೆ ಆಗಮಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಸ್ಥಳೀಯ ತಹಶೀಲ್ದಾರ, ತಾಪಂ, ಸಿಡಿಪಿಒ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಿಐಟಿಯು ನೀಡಿದ ಅಖಿಲ ಭಾರತ ಮುಷ್ಠರ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ, ಕರ್ನಾಟಕ ರಾಜ್ಯ ಗ್ರಾಪಂ ನೌಕರರು, …
Read More »50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು …
Read More »ಭಾರತೀಯ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಅನುಭವಿಸುವುದು ಮಾತ್ರವಲ್ಲದೇ ಮೂಲಭೂತ ಕರ್ತವ್ಯಗಳ ಪಾಲನೆ ಮಾಡುವುದರಿಂದ ಸಂವಿಧಾನ ದಿನ ಆಚರಣೆಯ ಸಾರ್ಥಕತೆಯಾಗುತ್ತದೆ
ಕಲ್ಲೋಳಿ ಸಂವಿಧಾನ ದಿನ ಆಚರಣೆ ಕಲ್ಲೋಳಿ: ನಮ್ಮ ದೇಶದ ಸಂವಿಧಾನ ಜಗತ್ತಿನ ಅತೀ ದೊಡ್ಡ ಮತ್ತು ಯಶಸ್ವಿ ಪ್ರಜಾಪ್ರಭುತ್ವದ ಸಂವಿಧಾನವಾಗಿದೆ. ಭಾರತೀಯ ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಅನುಭವಿಸುವುದು ಮಾತ್ರವಲ್ಲದೇ ಮೂಲಭೂತ ಕರ್ತವ್ಯಗಳ ಪಾಲನೆ ಮಾಡುವುದರಿಂದ ಸಂವಿಧಾನ ದಿನ ಆಚರಣೆಯ ಸಾರ್ಥಕತೆಯಾಗುತ್ತದೆ ಎಂದು ಮೂಡಲಗಿಯ ಶ್ರೀ ಶ್ರೀ ಶ್ರೀಪಾದ ಬೋಧ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪಿ. ಚೇತನ್ ರಾಜ ಅಭಿಪ್ರಾಯಪಟ್ಟರು. ಗುರುವಾರ ಕಲ್ಲೋಳಿ ಶ್ರೀ …
Read More »ರಸ್ತೆ ಸಂಚಾರಿ ನಿಯಮ ಪಾಲಿಸಿ ಅಪಘಾತಗಳಿಂದ ಮುಕ್ತರಾಗಬೇಕು
ರಸ್ತೆ ಸಂಚಾರಿ ನಿಯಮ ಪಾಲಿಸಿ ಅಪಘಾತಗಳಿಂದ ಮುಕ್ತರಾಗಬೇಕು ಮೂಡಲಗಿ: ‘ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಅಪಘಾತಗಳಿಂದ ಮುಕ್ತರಾಗಬೇಕು’ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಾಹನ ಚಲಾಯಿಸುವಾಗ ತಾಳ್ಮೆ ಮತ್ತು ಜವಾಬ್ದಾರಿ ಇರಬೇಕು ಎಂದರು. ವಾಹನಗಳ ಹಿಂಬದಿಗೆ ಕಡ್ಡಾಯವಾಗಿ ರೇಡಿಯಂ ಅಳವಡಿಸಬೇಕು, ಚಾಲಕರ …
Read More »ವಿಶೇಷ ಆರೈಕೆ ಮಕ್ಕಳ ಶಿಬಿರ
ವಿಶೇಷ ಆರೈಕೆ ಮಕ್ಕಳ ಶಿಬಿರ ಮೂಡಲಗಿ: ಶನಿವಾರ ದಿನಾಂಕ: 28-11-2020 ರಿಂದ 30-11-2020 ಸೋಮವಾರದವರೆಗೆ ಮೂಡಲಗಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಗೋಕಾಕದ ಶಿವಾ ಫೌಂಡೇಶನ್ ಇವರ ಸಹಯೋಗದಲ್ಲಿ ವಿಶೇಷ ಆರೈಕೆ ಮಕ್ಕಳ ಶಿಬಿರವನ್ನು ಚೈತನ್ಯ ಆಶ್ರಮ ವಸತಿ ಶಾಲೆ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ ಆಸಕ್ತ ಪಾಲಕರು/ಪೋಷಕರು ತಮ್ಮ ವಿಶೇಷ ಆರೈಕೆ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಬಹುದು. ಸಂಪರ್ಕ: 6360143005
Read More »ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …
Read More »ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಬನವಾಸಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಶಿರಸಿ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗೂ ಶಿರಸಿ ಕೃಷಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆರ್ಐಡಿಎಫ್-23 ಯೋಜನೆಯಡಿಯಲ್ಲಿ ನಿರ್ಮಿಸಿರುವ ಬನವಾಸಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವೂ ನ.27ರಂದು ಸಂಜೆ 4 ಗಂಟೆಗೆ ಬನವಾಸಿ ರೈತ ಸಂಪರ್ಕ ಕೇಂದ್ರದ ಆವರಣ, ಕದಂಬೋತ್ಸವ ಮೈದಾನದಲ್ಲಿ ಜರುಗಲಿದೆ ಎಂದು …
Read More »ಪಿಕೆಪಿಎಸ್ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಪಿಕೆಪಿಎಸ್ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ …
Read More »