ಮೂಡಲಗಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಲ್ಲೋಳಿ ಪಟ್ಟಣದ 101 ಮತಗಟ್ಟೆಯಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಕೋವಿಡ್ 19 ಸುರಕ್ಷತಾ ನಿಯಮಗಳನ್ನು ಪಾಲಿಸಿ ಮತಚಲಾಯಿಸಿದರು.
Read More »Yearly Archives: 2021
ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ – ಪ್ರಕಾಶ ಮಾದರ
ಮೂಡಲಗಿ: ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖಂಡ ಪ್ರಕಾಶ ಮಾದರ ಹೇಳಿದರು. ದಲಿತ ಸಂಘರ್ಷ ಸಮಿತಿ(ಸಂಯೋಜಕ) ಕಚೇರಿಯಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ 130 ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರರು ಬಾಲ್ಯದ ಜೀವನದಲ್ಲಿ ಅನೇಕ ಅವಮಾನಗಳನ್ನು ಎದುರಿಸಿ ಉನ್ನತ ಶಿಕ್ಷಣಪಡೆದು ಹಿಂದುಳಿದ ಜನಾಂಗಕ್ಕಾಗಿ ಶ್ರಮಿಸಿದ ಮಹಾನ ವ್ಯಕ್ತಿ. ಅವರ …
Read More »ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ
ಬೆಟಗೇರಿ: ಸಮೀಪದ ಮಮದಾಪೂರ ಶ್ರೀ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಪೂರ್ವಾಶ್ರಮದ ತಾಯಿಯವರಾದ ಶತಾಯುಷಿ, ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ ಮಮದಾಪೂರದ ಶ್ರೀಮಠದಲ್ಲಿ ರವಿವಾರ ಏ.18ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಶಿರಹಟ್ಟಿಯ ಶ್ರೀ.ನಿ.ಜ.ಫಕೀರಸಿದ್ಧರಾಮ ಮಹಾಸ್ವಾಮಿಜಿ ಸಾನಿಧ್ಯ ಹಾಗೂ ನಾಡಿನ ಹರ, ಗುರು, ಚರಮೂರ್ತಿಗಳು ಸಮ್ಮುಖ ವಹಿಸಲಿದ್ದಾರೆ ಎಂದು ಸ್ಥಳೀಯ ಶ್ರೀ ಮೌನಮಲ್ಲಿಕಾರ್ಜುನ ಮಠದ ಸದ್ಬಕ್ತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
Read More »ಪ್ರಧಾನಿ ಮೋದಿ ಅವರಿಗೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಸಮಯವೇ ಸಾಲುತ್ತಿಲ್ಲ – ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ
ಮೂಡಲಗಿ: ಆಸ್ಪತ್ರೆಯೊಂದರಲ್ಲಿ ಜನಿಸಿದ ಅಂಬಾನಿಯ ಮೊಮ್ಮಗನ್ನು ನೋಡಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ ಆದರೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಇವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ ಶಿವಬೋಧರಂಗ ಬ್ಯಾಂಕ ಸಂಭಾಗಣದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಮತಯಾಚಣೆ ವೇಳೆ ಮಾತನಾಡಿದ ಅವರು. ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ …
Read More »ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು. ಕ್ಷೇತ್ರದ ಹಾಗೂ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಪಕ್ಷದ ಋಣ ತೀರಿಸುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ಸಭಾ ಭವನದಲ್ಲಿ ಗುರುವಾರ ಸಂಜೆ ಅರಭಾವಿ ಕ್ಷೇತ್ರದ ಮುಖಂಡರು, ಚುನಾಯಿತ ಪ್ರತಿನಿಧಿಗಳು …
Read More »ಮೂಡಲಗಿಯಲ್ಲಿ ಸಿದ್ಧ ಸಮಾಧಿ ಯೋಗ ಶಿಬಿರ
ಮೂಡಲಗಿ: ಮನುಷ್ಯನ ಮಾನಸಿ, ದೈಹಿಕ ಹಾಗೂ ವಿಚಾರವಂತರಾಗಿಸಲು ಅತ್ಯಂತ ಉಪಯುಕ್ತವಾಗಿರುವ ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶ್ರೀ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಇವರ ಆಶ್ರಯದಲ್ಲಿ ಏ. 18 ರವಿವಾರ ಸಾಂಯಕಾಲ 6-00 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರುಜೀ ಅರುಣ ತಿಕೋಟಿಕರ ಗುರುಜೀ ಆಗಮಿಸಲಿದ್ದಾರೆ ಎಂದು ಸಂಘಟಕರಾದ ಪುಲಕೇಶಿ …
Read More »ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ
ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ ಮೂಡಲಗಿ: ವಿಶ್ವಮಾನ್ಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಏ. 17 ರಂದು ಕಮಲ ಗುರ್ತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಾರಿ ಅಂತರದಿಂದ ಗೆಲ್ಲಿಸಬೇಕೆಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮತದಾರರಲ್ಲಿ ಮನವಿ ಮಾಡಿದರು. ಗುರುವಾರ ರಂದು ಮೂಡಲಗಿ ನಗರದ ಕರೆಮ್ಮಾ ವೃತ್ತದಿಂದ ಪ್ರಾರಂಭವಾದ …
Read More »ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ
ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ ಮೂಡಲಗಿ – ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಕೃಷಿ ಕುಟುಂಬದಿಂದ ಬಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯವು ಶೈಕ್ಷಣಿಕ ವಾಗಿ, …
Read More »ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ – ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವದರಿಂದ ಬಿಜೆಪಿಗೆ ಆನೆ ಬಲ ಬಂದಿದ್ದು, ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ಸಂಜೆ ಪಟ್ಟಣದ ಬಸವ ಮಂಟಪದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಾರ್ವಜನಿಕ …
Read More »:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು- ಸುಭಾಷ ಜಂಬಗಿ
ಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಸುಭಾಷ ಜಂಬಗಿ ಹೇಳಿದರು. ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ ಮಹಾ ಮಾನವತಾವಾದಿಯಾಗಿದ್ದಾರೆ ಎಂದರು. ವಿಜಯ ಹಿರೇಮಠ ಕಾರ್ಯಕ್ರಮದ …
Read More »