Breaking News

Daily Archives: ಜೂನ್ 9, 2022

ದೇಶದ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ

ಮೂಡಲಗಿ: ಭತ್ತ-ರಾಗಿ ಸೇರಿದಂತೆ ದೇಶದ ಪ್ರಮುಖ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ ನಡೆದ ಸಂಪುಟ ಸಮಿತಿ ಸಭೆಯು ಅನ್ನದಾತರ ಆದಾಯ ವೃದ್ಧಿಗೆ ಕ್ರಮಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಶುಕ್ರವಾರ ಜೂನ್ 9 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸಾಮಾನ್ಯವಾಗಿ …

Read More »

ಅರುಣ ಶಹಾಪೂರ ಹಾಗೂ ಹನಮಂತ ನಿರಾಣಿ ಆಯ್ಕೆ ಖಚಿತ : ಎನ್. ರವಿಕುಮಾರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ರಣತಂತ್ರದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸುಲಭದ ಜಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ಹೇಳಿಕೆ

ಗೋಕಾಕ : ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವ್ಯವಸ್ಥಿತ ಸಂಘಟನೆಯಿಂದಾಗಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತ್ಯಧಿಕ ಮತಗಳ ಮುನ್ನಡೆ ದೊರಕಲಿದ್ದು, ಪದವೀಧರ ಕ್ಷೇತ್ರದ ಅಭ್ಯರ್ಥಿ ಹನಮಂತ ನಿರಾಣಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ …

Read More »

ಎಸ್‍ಎಸ್‍ಎಲ್‍ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷ್ಮೀ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ

  ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಅವರನ್ನು ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ 625 ರ ಪೈಕಿ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಅರಭಾವಿ ಕ್ಷೇತ್ರದ ಕೀರ್ತಿ ಪತಾಕೆಯನ್ನು ಹಾರಿಸಿರುವ ಮಹಾಲಕ್ಷ್ಮೀ ತಳವಾರ ಅವರನ್ನು ಶಾಸಕರ ಆಪ್ತ …

Read More »