Breaking News

Daily Archives: ಜುಲೈ 13, 2022

*ಅಮೃತ ಸ್ವ ಸಹಾಯ ಕಿರು ಉದ್ದಿಮೆಗಳಿಗೆ 45 ಲಕ್ಷ ರೂ ಬೀಜ ಧನದ ಚೆಕ್ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ.*

ಮೂಡಲಗಿ: ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ, ಸ್ವ-ಸಹಾಯ ಸಂಘಗಳನ್ನು ಕಿರು ಉದ್ಯಮಿಗಳನ್ನಾಗಿಸುವ ಅಮೃತ ಯೋಜನೆ ಅಡಿ 45 ಸಂಘಗಳಿಗೆ ತಲಾ ಒಂದು ಲಕ್ಷ ರೂ ಗಳಂತೆ ಸಹಾಯ ಧನವನ್ನು ನೀಡಲಾಗುತ್ತಿದ್ದು, ಈ ಸಹಾಯ ಧನವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸುವಂತೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಸಂಘಗಳಿಗೆ ಕರೆ ನೀಡಿದರು. ಬುಧವಾರದಂದು ಪಟ್ಟಣದ ಗುಡ್ಲಮಡ್ಡಿ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಪದಗ್ರಹಣ

ಸಮಾಜ ಸೇವೆಯಲ್ಲಿ ನಿಸ್ವಾರ್ಥತೆ ಇರಲಿ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಶರಣ ಐ.ಆರ್. ಮಠಪತಿ ಹೇಳಿದರು. ಇಲ್ಲಿಯ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2022-23ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಗೆ ನಿತ್ಯ ಸಾಕಷ್ಟು ಅವಕಾಶಗಳಿದ್ದು, ಪ್ರತಿಯೊಬ್ಬರಲ್ಲಿ ಸಮಾಜ ಸೇವೆ ಮಾಡುವ ಇಚ್ಛಾಶಕ್ತಿ ಇರಬೇಕು …

Read More »

ಟ್ರಾನ್ಸ್ ಫಾರ್ಮರ್ ಸ್ಥಳಾಂತರಕ್ಕೆ ನಂದಗಾಂವಿಮಠ ಆಗ್ರಹ

ಮೂಡಲಗಿ – ನಗರದ ಬಾಜಿ ಮಾರ್ಕೆಟ್ ನಲ್ಲಿ ಆಯ್ ಡಿ ಎಸ್ ಎಮ್ ಟಿ ಯೋಜನೆಯ ವ್ಯಾಪಾರಿ ಮಳಿಗೆಗಳ ಕೊನೆಯ ಮಳಿಗೆಯ ಹತ್ತಿರ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸಮಾಜ ಸೇವಕ ಮಹಾಲಿಂಗಯ್ಯ ನಂದಗಾಂವಿಮಠ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಈ ಟಿ ಸಿ ಇದ್ದು ಯಾವುದೇ ಸಮಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಕೂಡಲೇ ಟಿ ಸಿ ಯನ್ನು ಬೇರೆ ಕಡೆಗೆ …

Read More »