ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 ಮೀಟರ್ ರಸ್ತೆಯನ್ನು …
Read More »Daily Archives: ಆಗಷ್ಟ್ 23, 2022
ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಮಠದ 40ನೇ ವರ್ಷದ ಶ್ರಾವಣ ಮಾಸದ ಪುರಾಣ ಮಹಾಮಂಗಲೋತ್ಸವ ಹಾಗೂ ಜಾತ್ರಾ ಮಹೋತ್ಸವದ ಆಮಂತ್ರಪತ್ರಿಕೆಯನ್ನು ಬಿಡುಗಡೆ
ಆ.28 ರಂದು ಕಲ್ಲೋಳಿಯಲ್ಲಿ ಯಲ್ಲಾಲಿಂಗೇಶ್ವರ ಮಠದಲ್ಲಿ ಪುರಾಣ ಮಂಗಲೋತ್ಸವ ಕಾರ್ಯಕ್ರಮ ಸ್ವರ್ಣಪೀಠಾಪುರ ದತ್ತಾಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಭಾಗವಹಿಸುವರು. ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಆ.28 ರವಿವಾರದಂದು ಜರುಗಲಿರುವ ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಮಠದ 40ನೇ ವರ್ಷದ ಶ್ರಾವಣ ಮಾಸದ ಪುರಾಣ ಮಹಾಮಂಗಲೋತ್ಸವ ಹಾಗೂ ಜಾತ್ರಾ ಮಹೋತ್ಸವದ ಆಮಂತ್ರ ಪತ್ರಿಕೆಯನ್ನು ಸಂಘಟಕರು ಮಂಗಳವಾರ ಬಿಡುಗಡೆಗೋಳಿಸಿದರು. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೋಳಿಸಿದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪಲಗುದ್ದಿ ಮಾತನಾಡಿ, ಆ.28 …
Read More »ಭಕ್ತಿಭಾವದಲ್ಲಿ ಜರುಗಿದ ವಿಠ್ಠಲ ಮಂದಿರ ಉತ್ಸವ
ಮೂಡಲಗಿ: ನೂರಾರು ಸಂಖ್ಯೆಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಸಂತರು ತಾಳ, ಮೃದಂಗಗಳೊಂದಿಗೆ ಭಜನೆ, ಧ್ಯಾನಗಳ ಮೂಲಕ ಇಲ್ಲಿಯ ವಿಠ್ಠಲ ಮಂದಿರದಲ್ಲಿ ವಾರ್ಷಿಕ ಉತ್ಸವ ಕಾರ್ಯಕ್ರಮವು ನಾಲ್ಕು ದಿನಗಳ ವರೆಗೆ ಭಕ್ತಿಭಾವದಲ್ಲಿ ಜರುಗಿತು. ಪ್ರಾರಂಭದಲ್ಲಿ ಸಂತರಿಂದ ಗ್ರಂಥ ಸ್ಥಾಪನೆ, ಹರಿಪಾಠ, ಪ್ರವಚನ, ಕೀರ್ತನೆಗಳು, ಮಂಗಳಾರತಿ, ದಿಂಡಿ ಉತ್ಸವ, ಗೋಪಾಲ ಕಾಲಾ ಕಾರ್ಯಕ್ರಮಗಳು ಜರುಗಿದವು. ವಿಠ್ಠಲ ದೇವರ ಅಲಂಕೃತ ಪಾಲಕಿ ಉತ್ಸವವು ವಿಠ್ಠಲ ಮಂದಿರದಿಂದ ಪ್ರಾರಂಭಗೊಂಡು ಹಣಮಂತ ದೇವರ ದೇವಸ್ಥಾನಕ್ಕೆ ತೆರಳಿ ಮರಳಿ ವಿಠ್ಠಲ …
Read More »ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ತಾಲೂಕ ಘಟಕದ ಪದಾಧಿಕಾರಿಗಳಿಗೆ ಸತ್ಕಾರ
ಮೂಡಲಗಿ : ಸಮಾಜದ ತಪ್ಪು ತಡೆಗಳನ್ನು ಪತ್ರಿಕೆ, ಮಾಧ್ಯಮಗಳಲ್ಲಿ ಬಿತ್ತರಿಸಿ,ಸರ್ಕಾರದ ಗಮನಕ್ಕೆ ತರುತ್ತ,ತಮ್ಮ ಜೀವನದ ಬಹುಭಾಗವನ್ನು ಸಮಾಜ ಸೇವೆಗೆ ವಿನಿಯೋಗಿಸುವ ಪತ್ರಿಕಾ ಮಿತ್ರರ ಕಾರ್ಯ ಪ್ರಶಂಸನೀಯವಾದದ್ದು ಎಂದು ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕೀಹೊಳಿಯವರ ಮಾರ್ಗದರ್ಶನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಸತ್ಕಾರ ಸಮಾರಂಭದಲ್ಲಿ …
Read More »ಜೈವಿಕ ರಸಗೊಬ್ಬರದ ಮಹತ್ವ ಕುರಿತು ರೈತರಿಗೆ ಮಾಹಿತಿ ಕಾರ್ಯಕ್ರಮ
ಮೂಡಲಗಿ ಆ.22 : ಮಣ್ಣಿನ ಫಲವತ್ತತೆ ಹೆಚ್ಚುವುದರಿಂದ, ಬೆಳೆಯ ಹೆಚ್ಚಿನ ಇಳುವರಿ ಪಡೆಯಬಹುದು. ರೈತರು ರಾಸಾಯನಿಕ ಗೊಬ್ಬರಗಳಿಗೆ ಮಾರುಹೋಗದೆ ಜೈವಿಕ ರಸಗೊಬ್ಬರಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕೆಂದು ಕೃಷಿ ಸಂಯೋಜಕರಾದಂತ ಸಚಿನ್ ಕಬ್ಬೂರ ರವರು ರೈತರಿಗೆ ಕಿವಿಮಾತು ಹೇಳಿದರು. ರವಿವಾರದಂದು ತಾಲೂಕಿನ ಯಾದವಾಡ ಗ್ರಾಮದ ಮುಖಂಡರಾದ ಹಣಮಂತಗೌಡ ರಾಮನಗೌಡ ಪಾಟೀಲರ ತೋಟದಲ್ಲಿ ಜೈವಿಕ ರಸಗೊಬ್ಬರದ ಮಹತ್ವ ಕುರಿತು ರೈತರಿಗೆ ಮಾಹಿತಿ ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಿನ ರೈತರು …
Read More »