ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ ಮೂಡಲಗಿ: ಸಾರ್ವಜನಿಕರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಆಧಾರ ನೊಂದಣಿ ಕೇಂದ್ರವನ್ನು ಆರಂಭಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದು ತಹಸೀಲ್ದಾರ ಡಿ ಜಿ ಮಹಾತ ಅವರು ತಿಳಿಸಿದರು. ಗುರುವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನ ಆಧಾರ ನೊಂದಣಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಹೊಸ ಆಧಾರ ಕಾರ್ಡ, ಮೊಬೈಲ ನಂ, ತಿದ್ದುಪಡಿ ಹಾಗೂ ವಿಳಾಸ …
Read More »Yearly Archives: 2022
ಮಲೇರಿಯಾ ವಿರೋಧಿ ದಿನಾಚರಣೆ ಆಚರಣೆ
ಮೂಡಲಗಿ : ‘ಪರಿಸರರವನ್ನು ಎಷ್ಟು ಸ್ವಚ್ಚವಾಗಿ ಇಟ್ಟು ಕೊಳ್ಳುತ್ತವೇ ಅಷ್ಟು ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸ ಕಡ್ಡಿ ಚರಂಡಿ ನೀರು, ನಮ್ಮ ಮುತ್ತಲಿನ ವಾತಾರವರಣ ಮಲೀನವಾದಷ್ಟು ನಾವು ರೋಗದ ಗುಡಾಗುತ್ತವೆ’ ಎಂದು ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪನ್ಮೂಲ ವ್ಯಕ್ತಿ ಆರೋಗ್ಯ ನಿರೀಕ್ಷಣಾಧಿಕಾರಿ ರಾಮಚಂದ್ರ ಸಣ್ಣಕ್ಕಿ ಹೇಳಿದರು, ತಾಲೂಕಿನ ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಗುರುವಾರ ಆಯೋಜಿಸಿದ ಮಲೇರಿಯಾ ವಿರೋದಿ ಮಾಸಾಚರಣೆ ನಿಮಿತ್ಯ ದರ್ಮಟ್ಟಿ ಗ್ರಾಮದಲ್ಲಿ ಜಾಗೃತಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ವ ಜನಾಂಗದ ಹಿತ ಚಿಂತಕ- ರಂಗಪ್ಪ ಇಟ್ಟಣ್ಣವರ
ಯಾದವಾಡ – ಗುಲಗಂಜೀಕೊಪ್ಪ ರಸ್ತೆಗೆ 5 ಕೋಟಿ ರೂಪಾಯಿ. ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ …
Read More »ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೆ
ಮೂಡಲಗಿ: ಅಖಂಡ ಭಾರತದ ಸಂಕಲ್ಪದೊಂದಿಗೆ ಪ್ರಾಣತ್ಯಾಗ ಮಾಡಿದ ಜನಸಂಘದ ಪ್ರಥಮ ರಾಷ್ಟ್ರೀಯ ಅಧ್ಯಕ್ಷ ಡಾ.ಶ್ಯಾಮಾ ಪ್ರಸಾದ ಮುಖರ್ಜಿ ಅವರ ಬಲಿದಾನದ ದಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯದಾದ್ಯಂತ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದು ಕಾರ್ಯಕ್ರಮದ ರಾಜ್ಯ ಸಂಚಾಲಕರು, ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಗುರುವಾರ ಜೂ. 23 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ …
Read More »ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಾಕ್ಷಿಕ 74ನೇ ಅನ್ನದಾಸೋಹಕ್ಕೆ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರಿಂದ ಚಾಲನೆ
‘ಅನ್ನದಾನವು ಮಾನವೀಯತೆಯ ಪ್ರತೀಕ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 74ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠ ದಾನವಾಗಿದೆ, ಹಸಿದವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಕಲ್ಲೋಳಿಯ ವೈದ್ಯ ಡಾ. ಅಶೋಕ ಪಾಟೀಲ ಮಾತನಾಡಿ ಮೂಡಲಗಿ ಲಯನ್ಸ್ …
Read More »ಜೂ23 ಗುರುವಾರ ರಂದು ವಿದ್ಯುತ್ ವ್ಯತ್ಯಯ
ಮೂಡಲಗಿ: ಒಂದನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯ ಪ್ರಯುಕ್ತ ಮೂಡಲಗಿ, ಗುರ್ಲಾಪೂರ ಹಾಗೂ ವಿವಿಧ ಪ್ರದೇಶಗಳಲ್ಲಿ ಗುರುವಾರ ಜೂ23 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್. ಎಸ್. ನಾಗನ್ನವರ ಹಾಗೂ ಶಾಖಾಧಿಕಾರಿ ಪಿ. ಆರ್. ಯಡಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಬೆಟಗೇರಿ ಗ್ರಾಮದ ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕಗೆ ಶೇ.90ಅಂಕ
ಬೆಟಗೇರಿ:ಧಾರವಾಡ ಪೂರ್ಣಾ ಪಿಯು ಕಾಲೇಜಿನ ವಿದ್ಯಾರ್ಥಿ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಾಹೀದ ರಫೀಕ್ ಮಿರ್ಜಾನಾಯ್ಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇ.90.16 ರಷ್ಟು (541) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕ ಸಾಧನೆಗೆ ಸ್ಥಳೀಯ ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Read More »ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯೋಗ ದಿನಾಚರಣೆ
ಮೂಡಲಗಿ: ಇಂದಿನ ಅವಸರದ ಜೀವನದಲ್ಲಿ ಕೆಲಸದ ಜೊತೆಗೆ ನಮ್ಮ ಆರೋಗ್ಯವನ್ನು ಯೋಗ ಮತ್ತು ದ್ಯಾನದಿಂದ ಕಾಪಾಡಿಕೊಳ್ಳಲು ಸಾಧ್ಯ ಎಂದು ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆ ಮುಖ್ಯಸ್ಥ ಪ್ರಭಾತ್ಕುಮಾರ್ ಸಿಂಗ್ ಹೇಳಿದರು. ಅವರು ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಅರಳಿಕಟ್ಟಿ ಫೌಂಡೇಶನ್ ಆವರಣದಲ್ಲಿ ಆಯೋಜಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಅರಳಿಕಟ್ಟಿ ಫೌಂಡೇಶನ್ ಚೇರ್ಮನ್ ಡಾ. ಟಿ.ವ್ಹಿ.ಅರಳಿಕಟ್ಟಿ ಅವರು ಯೋಗ ದಿನಾಚರಣೆ ಆಚರಣೆ ಆಗಿರದೆ ವರ್ಷದ 365 ದಿನವೂ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ* *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ. ಅನುದಾನ : ಬಾಳಪ್ಪ ಗೌಡರ*
ಗೋಕಾಕ- ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್ಎಚ್ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …
Read More »ವಿಶ್ವಕ್ಕೆ ಯೋಗದ ಅನ್ಯನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ: ಕಮಲಾಕ್ಷಿ ನಾಯ್ಕ
ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲಾಕ್ಷಿ ನಾಯ್ಕ ಹೇಳಿದರು. ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ …
Read More »