Breaking News

Daily Archives: ಆಗಷ್ಟ್ 27, 2024

ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ.

ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …

Read More »

ಭಗವಂತಪ್ಪ ಪಾಂಡಪ್ಪ ಅಂಗಡಿ (96) ನಿಧನ

ನಿಧನ ವಾರ್ತೆ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದ ಭಗವಂತಪ್ಪ ಪಾಂಡಪ್ಪ ಅಂಗಡಿ (96) ಮಂಗಳವಾರ ರಂದು ನಿಧನರಾಗಿದ್ದಾರೆ.ಮೃತರ ಅಂತಿಮ ಇಚ್ಛೆಯಂತೆ ಅವರ ದೇಹವನ್ನು ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಗಾವಿ ಕೆಎಲ್ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ದೇಹದಾನ ನೀಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಮೃತರಿಗೆ ನಾಲ್ವರು ಪುತ್ರರರು, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೇಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸುತ್ತಿರುವುದು.ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ,ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.

Read More »