ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗ ಅಪ್ಪನ ಜಾತ್ರೆಗೆ ಆದಿಚುಂಚನಗಿರಿ ಶ್ರೀಗಳಿಂದ ಚಾಲನೆ ಮೂಡಲಗಿ: ಜ್ಞಾನ ಮತ್ತು ಮುಕ್ತಿ ಪಡೆಯಬೇಕಾದರೆ ಗುರು ಮುಖ್ಯವಾಗಿದ್ದಾನೆ. ವ್ಯಕ್ತಿ, ಮುಕ್ತಿ ಪಡೆಯಬೇಕಾದರೆ ಜ್ಞಾನಬೇಕು ಎಂದು ಆದಿಚುಂಚನಗಿರಿಯ ಪೂಜ್ಯ ಶ್ರೀ ಜಗದ್ಗುರು ನಿರ್ಮಲಾನಂದ ಮಹಾಸ್ವಾಮಿಜಿ ಹೇಳಿದರು. ಅವರು ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಜರುಗುವ ಶ್ರೀ ಸಿದ್ಧಲಿಂಗ ಅಪ್ಪನ ಜಾತ್ರೆ ಹಾಗೂ 26ನೇ …
Read More »Monthly Archives: ಡಿಸೆಂಬರ್ 2024
ಮನಸ್ಸನ್ನು ಬುದ್ದಿಯ ಹತೋಟಿಯಲ್ಲಿ ಇಟ್ಟುಕೊಳ್ಳಲು ಸತ್ಸಂಗದ ಅನಿವಾರ್ಯತೆ ಹೆಚ್ಚಿದೆ- ಆದಿಚುಂಚನಗಿರಿ ಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ
ತೊಂಡಿಕಟ್ಟಿ: ಮನುಷ್ಯನ ಮನಸ್ಸು ಚಂಚಲವಾಗಿದೆ. ಮನುಷ್ಯನ ಮನಸ್ಸು ಮತ್ತು ಬುದ್ದಿ ಒಂದಕ್ಕೊಂದು ಹೊಂದಾಣಿಕೆ ಇಲ್ಲದಾಗಿದೆ. ಮನಸ್ಸನ್ನು ಬುದ್ದಿಯ ಹತೋಟಿಯಲ್ಲಿ ಇಟ್ಟುಕೊಳ್ಳಲು ಸತ್ಸಂಗದ ಅನಿವಾರ್ಯತೆ ಹೆಚ್ಚಿದೆ ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಮಂಗಳವಾರ ರಾಮದುರ್ಗ ತಾಲ್ಲೂಕಿನ ತೊಂಡಿಕಟ್ಟಿಯ ಅವಧೂತ ಗಾಳೇಶ್ವರ ಶ್ರೀಗಳ 80ನೇ ಪುಣ್ಯ ಸ್ಮರಣೆ ಅಂಗವಾಗಿ ಅವಧೂತ ಪುಂಡಲೀಕ ಮಹಾರಾಜರ ಶಿಲಾ ಮಂದಿರದ ಉದ್ಘಾಟನೆ ನಿಮಿತ್ಯ ಜರುಗಿದ ಸತ್ಸಂಗದಲ್ಲಿ ಭಾಘವಹಿಸಿ ಮಾತನಾಡಿದ ಅವರು, ಬುದ್ದಿಯ …
Read More »ಅಪಾರ ಜನಸಾಗರ ಮಧ್ಯೆ ಜರುಗಿದ ಅವಧೂತ ಗಾಳೇಶ್ವರ ಮಹಾರಥೋತ್ಸವ
ಅಪಾರ ಜನಸಾಗರ ಮಧ್ಯೆ ಜರುಗಿದ ಅವಧೂತ ಗಾಳೇಶ್ವರ ಮಹಾರಥೋತ್ಸವ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ನಿಮಿತ್ಯ ಮಂಗಳವಾರದಂದು ಶ್ರೀ ಅವಧೂತ ಗಾಳೇಶ್ವರ ಸ್ವಾಮೀಗಳ ಮಹಾರಥೋತ್ಸವ ಅಪಾರ ಜನಸಾಗರ ಮಧ್ಯೆ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ವೆಂಕಟೇಶ್ವರ ಮಹಾರಾಜರ ಸಾನ್ನಿಧ್ಯದಲ್ಲಿ ಜರುಗಿತು. ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ನಿಮಿತ್ಯ ಮಂಗಳವಾರದಂದು ಮುಂಜಾನೆ ಶ್ರೀಗಳ ಮೂರ್ತಿಗೆ ಅಭಿಷೇಕ ವಿಷೇಶ ಪೂಜೆ …
Read More »ರಾಜಾಪೂರ: ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮಪ್ರೌಢ ಶಾಲೆ ಸ್ಪಂಧನ ಸಾಂಸ್ಕೃತಿಕ ಕಾರ್ಯಕ್ರಮ
ರಾಜಾಪೂರ: ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮಪ್ರೌಢ ಶಾಲೆ ಸ್ಪಂಧನ ಸಾಂಸ್ಕೃತಿಕ ಕಾರ್ಯಕ್ರಮ ಮೂಡಲಗಿ: ಗುಣಾತ್ಮಕ ಶಿಕ್ಷಣ ಕ್ರಿಯಾಶೀಲ ಬೆಳವಣಿಗೆ ಎಂಬ ಪರಿಕಲ್ಪನೆಯೊಂದಿಗೆ ಮಕ್ಕಳ ಸರ್ವಾಗಿನ ಅಭಿವೃದ್ಧಿಗಾಗಿ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಕಳೆದು 12 ವರ್ಷಗಳಿಂದ ಶ್ರಮಿಸುತ್ತಿದೆ. 2012ರಲ್ಲಿ 140 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಈ ಶಾಲೆಯು ಇಂದು 988 ವಿದ್ಯಾರ್ಥಿಗಳನ್ನು ಒಳಗೊಂಡ ಗ್ರಾಮೀಣ ಭಾಗದಲ್ಲಿ ಅಕ್ಷರ ಕ್ರಾಂತಿಯನ್ನು ಮಾಡುತ್ತಿದೆ. ಗ್ರಾಮೀಣ ಪ್ರದೇಶದ …
Read More »ತೊಂಡಿಕಟ್ಟಿಯಲ್ಲಿ ಗಾಳೇಶ್ವರ ಮಠ ಮತ್ತು ಏಮ್ ಫಾರ್ ಸೇವಾ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲಾ ಕಟ್ಟಡ ಉದ್ಘಾಟನೆ
ತೊಂಡಿಕಟ್ಟಿಯಲ್ಲಿ ಗಾಳೇಶ್ವರ ಮಠ ಮತ್ತು ಏಮ್ ಫಾರ್ ಸೇವಾ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲಾ ಕಟ್ಟಡ ಉದ್ಘಾಟನೆ ತೊಂಡಿಕಟ್ಟಿ: ಅವಧೂತ ಗಾಳೇಶ್ವರ ಮಹಾಸ್ವಾಮಿಜಿಯವರ ಪುಣ್ಯಾರಾಧನೆ ಹಾಗೂ ಸ್ವಾಮಿ ದಯಾನಂದ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲಾ ಪೂಜ್ಯರ ಉಪಸ್ಥಿತಿಯಲ್ಲಿ ಭಾಗವಹಿಸಿದ್ದು ಖುಷಿ ತಂದಿದೆ. ಈ ಸಂಸ್ಥೆಯಿಂದ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉನ್ನತ ಮಟ್ಟದ ಹುದ್ದೆ ಅಲಂಕರಿಸುವುದರಲ್ಲಿ ಸಂಶಯವಿಲ್ಲ ಎಂದು ಚನೈ ಅಖಿಲ ಭಾರತ …
Read More »ಇಂದಿನ ಯುಗದಲ್ಲಿ ಎಷ್ಟು ಓದಿದರೂ ಕಡಿಮೆ:ಬಸವರಾಜ ಪಣದಿ
ಇಂದಿನ ಯುಗದಲ್ಲಿ ಎಷ್ಟು ಓದಿದರೂ ಕಡಿಮೆ:ಬಸವರಾಜ ಪಣದಿ ಬೆಟಗೇರಿ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಾಲಾ ಮಕ್ಕಳಿಗೆ ಸಾಮಾನ್ಯ ಜ್ಞಾನ ಅವಶ್ಯಕವಾಗಿದೆ. ಇಂದು ಶಾಲಾ ಮಕ್ಕಳು ಎಷ್ಟು ಓದಿದರೂ ಕಡಿಮೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಮತ್ತು ಸ್ಥಳೀಯ ಗ್ರಾಪಂ ಗ್ರಂಥಾಲಯ ಸಹಯೋಗದಲ್ಲಿ 75ನೇ ವರ್ಷದ ಸಂವಿಧಾನ ಸಂಭ್ರಮ ದಿನಾಚರಣೆ ಪ್ರಯುಕ್ತ ಸ್ಥಳೀಯ ಸರಕಾರಿ ಪ್ರೌಢ …
Read More »ತೊಂಡಿಕಟ್ಟಿ: ಅವಧೂತೈಕ್ಯ ಪುಂಡಲೀಕ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ
ತೊಂಡಿಕಟ್ಟಿ: ಅವಧೂತೈಕ್ಯ ಪುಂಡಲೀಕ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ತೊಂಡಿಕಟ್ಟಿ: ಎಲ್ಲಕ್ಕಿಂತಲೂ ಗುರುವಿನ ಋಣ ತೀರಿಸ ಬೇಕು, ಗಾಳೇಶ್ವರ ಮಠದ ಪೀಠಾಧಿಪತಿ ವೆಂಕಟೇಶ್ವರ ಮಹಾರಾಜರು ಶ್ರೀಮಠ ಪೀಠಾಧಿಪತಿಗಳಾಗಿ ಅವಧೂತೈಕ್ಯ ಪುಂಡಲೀಕ ಮಹಾರಾಜರ ಶಿಲಾಮಂದಿರವನ್ನು ಭಕ್ತ ಸಮೂಹ ಸಹಕಾರದಿಂದ ಕೇವಲ ಒಂದೆ ತಿಂಗಳಲ್ಲಿ ಸುಂದರವಾದ ಮಂದಿರವನ್ನು ನಿರ್ಮಿಸಿ ಗುರುಗಳ ಋಣವನ್ನು ತೀರಿಸಲು ಪ್ರಯತ್ನಿಸಿರುವುದು ಶ್ಲಾಘನಿಯವಾದದ್ದು ಎಂದು ಹುಕ್ಕೇರಿ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ರಾಮದುರ್ಗ ತಾಲೂಕಿನ ತೊಂಡಿಕಟ್ಟಿ …
Read More »ಪ್ರತಿಯೊಬ್ಬರೂ ಭಗವಂತನ ನಾಮಸ್ಮರಣೆ ಮಾಡಿ: ಕೇದಾರ್ ಪೀಠದ ಜಗದ್ಗುರುಗಳು
ಬೆಟಗೇರಿ:ಮನುಷ್ಯ ಜನ್ಮ ಸಾರ್ಥಕವಾಗಲು ಪ್ರತಿಯೊಬ್ಬರೂ ದೇವರ ನಾಮಸ್ಮರಣೆ ಮಾಡಿ, ಭಗವಂತನ ಕೃಪಾರ್ಶೀವಾದಕ್ಕೆ ಪಾತ್ರರಾಗಬೇಕು. ವೃತಾಚರಣೆ ಮೂಲಕ ಶ್ರೀಅಯ್ಯಪ್ಪಸ್ವಾಮಿ ನಾಮಸ್ಮರಣೆಗೈಯುತ್ತಿರುವ ಶ್ರೀಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ದೇವರು ಒಳ್ಳೆಯದು ಮಾಡಲಿ ಎಂದು ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಡಿ.27ರಂದು ನಡೆದ …
Read More »ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ
ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಇಂದಿನ ಯುಗದಲ್ಲಿ ಗಣಕಯಂತ್ರಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ಕಾರ್ಯಾಲಯದ ಸಭಾಭುವನದಲ್ಲಿ ಇತ್ತೀಚೆಗೆ ನಡೆದ ಗಣಕಯಂತ್ರ ಪಿತಾಮಹ ಚಾಲ್ಸ್ ಬ್ಯಾಬೇಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಂಪ್ಯೂಟರ್ ಅಪರೇಟರ್ ದಿನಾಚರಣೆ ನಿಮಿತ್ಯ ಸ್ಥಳೀಯ ಗ್ರಾಪಂ …
Read More »ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಜನವರಿ 02 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಜನವರಿ 02-2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 ರಂದು …
Read More »