Breaking News

Daily Archives: ಡಿಸೆಂಬರ್ 8, 2024

ವೇಟ್‌ ಲಿಪ್ಟಿಂಗ್‌ದಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆ

ವೇಟ್‌ ಲಿಪ್ಟಿಂಗ್‌ದಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆ ಮೂಡಲಗಿ: ಮೂಡಲಗಿ ಕೇಶವಕುಮಾರ ಲಕ್ಕಪ್ಪ ವ್ಯಾಪಾರಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 89 ಕೆಜಿ ವಿಭಾಗದ ವೇಟ್‌ ಲಿಪ್ಟಿಂಗ್‌ದಲ್ಲಿ ಸತತ ಎರಡನೇ ಬಾರಿ ಪ್ರಥಮ ಸ್ಥಾನದಲ್ಲಿ ಬಂಗಾರ ಪದಕ ಪಡೆದುಕೊಂಡು ರಾಷ್ಟ್ರ ಮಟ್ಟದ ವೇಟ್‌ ಲಿಪ್ಟಿಂಗ್‌ ಸ್ಪರ್ಧೆಗೆ ಆಯ್ಕೆಯಾಗಿರುವನು. ಸದ್ಯ ಮೂಡಬಿದರಿಯ ಆಳ್ವಾ ಅಯುರ್ವೇದಿಕ ವೈದ್ಯಕೀಯ ಕಾಲೇಜುದಲ್ಲಿ ದ್ವಿತೀಯ ವರ್ಗದಲ್ಲಿ ಓದುತ್ತಿರುವ ಕೇಶವಕುಮಾರ ಮೂಡಲಗಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿರುವನು. …

Read More »

ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ, ಯಾದವಾಡ ಸಾಂಸ್ಕೃತಿಕ ಉತ್ಸವ-2024

ಮೂಡಲಗಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಯಾದವಾಡದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕರೂ ಸೋಲಬೇಕಾಯಿತು. ಸೋತೆವು ಎಂದ ಮಾತ್ರಕ್ಕೆ ಕೈಕಟ್ಟಿ ಕುಳಿತುಕೊಳ್ಳುವ ಜಾಯಮಾನ ನಮ್ಮದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ, ಯಾದವಾಡ ಸಾಂಸ್ಕೃತಿಕ ಉತ್ಸವ-2024 ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು ,ಯಾವುದೇ ಕೆಲಸಗಳನ್ನು ಮಾಡಲು ಮುಂದಾದರೆ …

Read More »

ಬಸ್ಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಭಗವಂತ ತಮ್ಮ ಸೇವೆ ಮಾಡಲು ಅವಕಾಶ ನೀಡಿದರಿಂದ ಶಿವಾಪೂರ(ಹ) ಗ್ರಾಮಕ್ಕೆ ವಿಶೇಷ ಆದ್ಯತೆ ನೀಡಿ ಅಭಿವೃದ್ದಿ ಮಾಡಲಾಗುತ್ತಿದ್ದು ಗ್ರಾಮದ ಅಡಿವಿಸಿದ್ದೇಶ್ವರ ಮಠ, ಬಸ್ಸ್ ನಿಲ್ದಾಣ ಹಾಗೂ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಶೆಲ್ಟರ್ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ತಾಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ರಾಜ್ಯಸಭಾ ಸಂಸದರ ಸ್ಥಳಿಯ ಪ್ರದೇಶಾಭಿವೃದ್ದಿ ಯೋಜನೆಯಡಿ ಮೂಡಲಗಿ ರಸ್ತೆಗೆ ಹೊಂದಿಕೊಂಡ ಬಸ್ಸ್ …

Read More »