Breaking News
Home / 2025 / ಜೂನ್ (page 2)

Monthly Archives: ಜೂನ್ 2025

ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಮಳೆಯು ಉತ್ತಮವಾಗಿ ಆಗುತ್ತಿದ್ದು,- ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ರೈತರಿಗಾಗಿಯೇ ಕೆಎಂಎಫ್ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಂಡು ತಮ್ಮ ಆರ್ಥಿಕ ಬಲವರ್ಧನೆ ಮಾಡಿಕೊಳ್ಳುವಂತೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಎಂಎಫ್ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು. ಮಳೆರಾಯನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಮಳೆಯು ಉತ್ತಮವಾಗಿ ಆಗುತ್ತಿದ್ದು, ರೈತರಿಂದ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ ಎಂದು ತಿಳಿಸಿದರು. ಹೈನುಗಾರಿಕೆಯನ್ನು ಉತ್ತೇಜಿಸಲು ಕೆಎಂಎಫ್ …

Read More »

‘ಕವಿತೆಗಳು ಸಮಾಜವನ್ನು ಬದಲಿಸುವ ಶಕ್ತಿ ಹೊಂದಿರಬೇಕು’: ಗುರುರಾಜ ಹೊಸಕೋಟಿ

  ಮೂಡಲಗಿ: ‘ಕವಿ ತಾನು ಬರೆಯುವ ಕಾವ್ಯವು ಜನರ ಹೃದಯವನ್ನು ಮುಟ್ಟವಂತಿರಬೇಕು’ ಎಂದು ಜಾನಪದ ಗಾಯಕ ಗುರುರಾಜ ಹೊಸಕೋಟಿ ಅವರು ಹೇಳಿದರು. ಇಲ್ಲಿಯ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಮಹಾರಾಜ ಸಿದ್ದು ಹಳ್ಳೂರ ಇವರ ‘ಎಷ್ಟ ಚಂದಿತ್ತ ಆವಾಗ’ ಕವನ ಸಂಕಲವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಕವಿತೆಗಳು ಸಾಮಾಜಿಕ ಕಳಕಳಿ ಹಾಗೂ ಸಮಾಜವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದಾಗ ಕವಿತೆಗಳು ಸಾರ್ಥಕವನ್ನು ಪಡೆಯುತ್ತವೆ ಎಂದರು. ಮಹಾರಾಜ ಸಿದ್ದು ಅವರು ಬರೆದಿರುವ ಕವನಗಳು …

Read More »

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ

ಬೆಳಗಾವಿ: ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾ ಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ. ಆದರೆ ಖಂಡಿತವಾಗಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು …

Read More »

ಪುರಸಭೆಯಿಂದ ನಿರ್ಮಿಸಲು ಉದ್ದೇಶಿಸಿರುವ ಒಟ್ಟು 7.68 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆ

ಮೂಡಲಗಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ಇಲ್ಲಿನ ಸಂಗಪ್ಪಣ್ಣ ವೃತ್ತದ ಬಳಿ ಪುರಸಭೆಯಿಂದ ನಿರ್ಮಿಸಲು ಉದ್ದೇಶಿಸಿರುವ ಒಟ್ಟು 7.68 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಸರ್ವತೋಮುಖ ಏಳ್ಗೆಯೇ ನನ್ನ ಗುರಿಯಾಗಿದೆ ಎಂದು ಹೇಳಿದರು. ಮೂಡಲಗಿ ತಾಲ್ಲೂಕು ಕೇಂದ್ರಕ್ಕೆ …

Read More »

ಯೋಗ ಮಾಡಿ ಗಮನಸೆಳೆದ ಮೂರು ವರ್ಷದ ಬಾಲಕಿ ತನುಶ್ರೀ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮೂರು ವರ್ಷದ ಬಾಲಕಿ ಕುಮಾರಿ ತನುಶ್ರೀ ಡಾ.ಶಿವಾನಂದ ಫಿರೋಜಿ ಅವಳು ವಿವಿಧ ಭಂಗಿಗಳಲ್ಲಿ ಯೋಗ ಮಾಡಿ ಗಮನಸೆಳೆದಳು.

Read More »

ಪ್ರತಿ ದಿನ ಪ್ರತಿಯೊಬ್ಬರೂ ಯೋಗ ಮಾಡಿ ಆರೋಗ್ಯವಾಗಿರಿ: ರಮೇಶ ಅಳಗುಂಡಿ

  ಬೆಟಗೇರಿ:ಯೋಗ ಭಾರತೀಯ ಪ್ರಾಚೀನ ಪರಂಪರೆಯ ಅತ್ಯಮೂಲ್ಯ ಕೊಡುಗೆಯಾಗಿದೆ. ಪ್ರತಿ ದಿನ ಪ್ರತಿಯೊಬ್ಬರೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂ.21ರಂದು ಆಯೋಜಿಸಿದ 11ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವಕ್ಕೆ ಭಾರತ ದೇಶ ಯೋಗದ ಕೊಡುಗೆ …

Read More »

ವಿಶ್ವಕ್ಕೆ ಯೋಗದ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ: ರವಿ ಭರಮನಾಯ್ಕ

ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್‍ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರವಿ ಭರಮನಾಯ್ಕ ಹೇಳಿದರು. ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ  ಅನನ್ಯ …

Read More »

ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮೂಡಲಗಿ: ಯೋಗವು ಭಾರತ ದೇಶದಲ್ಲಿ ಮಾನವ ಶರೀರದ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿಯಾಗಿದ್ದು, ನಮ್ಮ ದೇಶ ಜಗತ್ತಿಗೆ ನೀಡಿದ ಬೆಲೆ ಕಟ್ಟಲಾಗದ ಒಂದು ಮಹಾನ ಕೊಡುಗೆ ಯೋಗಭ್ಯಾಸವಾಗಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು. ಶನಿವಾರದಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೇಂದ್ರ ಆಯುಷ್ಯ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ತಾಲೂಕಾಡಳಿತ ಮೂಡಲಗಿ, ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ ಸಂಸ್ಥೆ ಕಲ್ಲೋಳಿ, ಮೂಡಲಗಿ …

Read More »

ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ

  ಮೂಡಲಗಿ: ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಆತ್ಮದ ಮಧ್ಯೆ ಸಮತೋಲನ ಸಾಧಿಸುವುದೇ ಯೋಗ ಎಂದು ಹೇಳಿದರು. ಯೋಗವು ಮಾನವ ಜೀವನದ ಸಮಗ್ರ …

Read More »

ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿಯಿಂದ ಹಲವು ಯೋಜನೆ

ಬೆಳಗಾವಿ: ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್‌ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್‌ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ನಗರದ ಧರ್ಮನಾಥ ಭವನದಲ್ಲಿ ಶುಕ್ರವಾರ ನಡೆದ ಬೆಳಗಾವಿ ತಾಲೂಕಿನ ಪ್ರಾಥಮಿಕ ಕೃಷಿ …

Read More »