Breaking News

Daily Archives: ಆಗಷ್ಟ್ 22, 2025

ಆ.24 ರಂದು ಉಪನೋಂದಣಿ ಕಛೇರಿ ಕಾರ್ಯ ನಿರ್ವಹಿಸಲಿದೆ

ಮೂಡಲಗಿ : ರಾಜ್ಯ ಸರಕಾರದ ಹಾಗೂ ನೋಂದಣಿ ಮಹಾಪರಿವೀಕ್ಷಕರ ಆದೇಶದಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸರದಿಧಿಯ ಆಧಾರದ ಮೇಲೆ ಈ ಭಾನುವಾರ ಆ.24 ರಂದು ಮೂಡಲಗಿ ಉಪನೋಂಣಿ ಕಛೇರಿ ಕಾರ್ಯ ನಿರ್ವಹಿಸಲಿದೆ. ಆ.26 ದಂದು ಮಂಗಳವಾರ ಕಛೇರಿಗೆ ರಜೆ ಇರುವದು ಎಂದು ಉಪನೋಂಣಿ ಅಧಿಕಾರಿ ಓ.ಹರಿಯಪ್ಪ ತಿಳಿಸಿದ್ದಾರೆ.  

Read More »

ಯಶಸ್ಸಿಗೆ ಕೊನೆ ಇಲ್ಲ – ಎಸ್. ಎಮ್ ಕುಂಬಾರ

ಮೂಡಲಗಿ : ನಾವು ಜೀವನದಲ್ಲಿ ಒಂದು ಗುರಿ ಇಟ್ಟುಕೊಂಡು ಅದನ್ನು ಮುಟ್ಟಿದ ತಕ್ಷಣ ಯಶಸ್ಸು ಅನ್ನಲಿಕ್ಕೆ ಆಗಲ್ಲಾ. ಯಶಸ್ಸಿಗೆ ಕೊನೆಯೆ ಇಲ್ಲಾ. ಜೀವನದ ಕೊನೆಯ ಘಟ್ಟದವರೆಗೂ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದೇ ನಿಮ್ಮದಾರಿಯಲ್ಲಿ ನೀವು ಸಾಗಿದರೆ ಅದುವೆ ಯಶಸ್ಸು ಎಂದು ಜಮಖಂಡಿ ತಾಲೂಕಿನ ಮೈಗೂರ ಸರ್ಕಾರಿ ಪ.ಪೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಸ್. ಎಮ್ ಕುಂಬಾರ ಹೇಳಿದರು. ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ವಾಣಿಜ್ಯ ಹಾಗೂ ಬಿಸಿಎ ಮಹಾವಿದ್ಯಾಲಯದ ಸನ್ …

Read More »

ಗುರುಪುಷ್ಯಾಮೃತ ದಿನ ನಡೆದ ಕುಂಕುಮಾರ್ಚನೆ

ಮೂಡಲಗಿ ಪಟ್ಟಣದ ಢವಳೇಶ್ವರ ಕಾಲನಿಯಲ್ಲಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ತೆಗ್ಗಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‍ದ ಮಾತೃಶಕ್ತಿ ವತಿಯಿಂದ ಗುರುಪುಷ್ಯಾಮೃತ ದಿನ ಗುರುವಾರದಂದು ನಡೆದ ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ ಮಹಿಳೆಯರು.

Read More »

ಆ.24ರಿಂದ ಬೆಟಗೇರಿಯಲ್ಲಿ 41ನೇ ಸತ್ಸಂಗ ಸಮ್ಮೇಳನ *ಐದು ದಿನ ಸಂಜೆ 7:30ಗಂಟೆಗೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 41ನೇ ಸತ್ಸಂಗ ಸಮ್ಮೇಳನ ಆ.24ರಿಂದ ಆ.28ತನಕ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಆ.24ರಂದು ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಸಾಯಂಕಾಲ 7:30ಗಂಟೆಗೆ ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ, ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಇಟ್ನಾಳದ ಸಿದ್ದೇಶ್ವರ ಸ್ವಾಮಿಜಿ, ಬಿಲಕುಂದಿ …

Read More »