Breaking News

Daily Archives: ಸೆಪ್ಟೆಂಬರ್ 10, 2025

*ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ: ನಾನು ಮತ್ತು ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಸಂಘಗಳಿಗೆ ಇಷ್ಟವಾಗುವ ರೀತಿಯಲ್ಲಿ …

Read More »

ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ:ಡಾ.ನಿಕೀಲ ಜ್ಯೋಶಿ

ಬೆಟಗೇರಿ:ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್‍ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗುಲಬುರ್ಗಾ ತರಬೇತಿ ಕೇಂದ್ರದ ನಿವೃತ್ತ ಜಂಟಿ ನಿರ್ದೇಶಕ ಡಾ.ನಿಕೀಲ ಜ್ಯೋಶಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸೆ.10ರಂದು ನಡೆದ 2024-25ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಹೈನುಗಾರಿಕೆ ರೈತರ ಬದುಕಿನ …

Read More »