Breaking News

Daily Archives: ಡಿಸೆಂಬರ್ 14, 2025

ಡಾ. ಶಾಮನೂರು ಶಿವ ಶಂಕರಪ್ಪ(94) ನವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತೀವ್ರ ಸಂತಾಪ

ಮೂಡಲಗಿ: ಹಿರಿಯ ಮುತ್ಸದ್ದಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಮಾಜಿ ಸಚಿವ ಡಾ. ಶಾಮನೂರು ಶಿವ ಶಂಕರಪ್ಪ(94) ನವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಾ. ಶಾಮನೂರು ಶಿವಶಂಕರಪ್ಪನವರು ವಿಧಾನಸಭೆಯ ಹಿರಿಯ ಸದಸ್ಯರು. ಸುಮಾರು ಆರು ಬಾರಿ ಶಾಸಕರಾಗಿ, ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ದಾವಣಗೆರೆಯಲ್ಲಿ ಬಾಪೂಜಿ ಶಿಕ್ಷಣ …

Read More »

ದೇವರು, ತಾಯಿ-ತಂದೆ, ಪೂಜ್ಯರು ಮತ್ತು ಜನರ ಆಶೀರ್ವಾದದಿಂದ ನಾವು ಜಿಲ್ಲೆಯಲ್ಲಿಯೇ ಗಟ್ಟಿಯಾಗಿ ಜನರ ಮುಂದೆ ನಿಲ್ಲಲು ಕಾರಣವಾಗಿದೆ -ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ದೇವರು, ತಾಯಿ-ತಂದೆ, ಪೂಜ್ಯರು ಮತ್ತು ಜನರ ಆಶೀರ್ವಾದದಿಂದ ನಾವು ಜಿಲ್ಲೆಯಲ್ಲಿಯೇ ಗಟ್ಟಿಯಾಗಿ ಜನರ ಮುಂದೆ ನಿಲ್ಲಲು ಕಾರಣವಾಗಿದೆ. ಮುಂದೆಯೂ ಸಹ ಇದೇ ಆಶೀರ್ವಾದವು ಸದಾ ಕಾಲ ನಮ್ಮೇಲಿರಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ಮುನ್ಯಾಳ- ರಂಗಾಪೂರ ಮಠದಲ್ಲಿ ಶನಿವಾರದಂದು ನೂತನವಾಗಿ ಅಸ್ತಿತ್ವಕ್ಕೆ ಬಂದ ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಠ- ಮಾನ್ಯಗಳಿಂದ ಮಾತ್ರ ಸಮಾಜವು ಪ್ರಗತಿ ಸಾಧಿಸಲಿಕ್ಕೆ ಸಾಧ್ಯವಿದೆ …

Read More »

ಹನುಮಂತ ದೇವರಿಗೆ ಹಲವಾರು ಶತಮಾನಗಳ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀಗಳು

ಹನುಮಂತ ದೇವರಿಗೆ ಹಲವಾರು ಶತಮಾನಗಳ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀಗಳು ಬೆಟಗೇರಿ:ಮನುಷ್ಯನ ಮನಸ್ಸು ಸದಾ ಪರಿಶುದ್ದವಾಗಿದ್ದರೆ ಆತನ ಮನೆ-ಮನ ನಿತ್ಯ ನಂದಾದೀಪದಂತೆ ಬೆಳಗುತ್ತಿರುತ್ತದೆ. ಹನುಮಂತ ದೇವರು ಭಕ್ತರಿಗೆ ಇಷ್ಟಾರ್ಥಗಳನ್ನು ಪೂರೈಸುವ ಆರಾಧ್ಯ ದೇವನಾಗಿದ್ದಾನೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಹನುಮಂತ ದೇವರ ದೇವಾಲಯದಲ್ಲಿ ಶನಿವಾರ ಡಿ.13ರಂದು ನಡೆದ ಕಾರ್ತಿಕೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಅವರು ದೀಪ ಹಚ್ಚಿ …

Read More »

ಪಂಚಾಯತ ನೌಕರರಿಗೆ ರೂ.೩೬ ಸಾವಿರ ಕನಿಷ್ಠ ವೇತನ ನಿಗದಿಗಾಗಿ ಒತ್ತಾಯಿಸಿ ಡಿ. 20ರಂದು “ಬೆಂಗಳೂರು ಚಲೋ”

ಪಂಚಾಯತ ನೌಕರರಿಗೆ ರೂ.೩೬ ಸಾವಿರ ಕನಿಷ್ಠ ವೇತನ ನಿಗದಿಗಾಗಿ ಒತ್ತಾಯಿಸಿ ಡಿ. 20ರಂದು “ಬೆಂಗಳೂರು ಚಲೋ” ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಪಂಚಾಯತ ನೌಕರರು ಬಿಲ್ ಕಲೆಕ್ಟರ್‌ಗಳಾಗಿ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಫರೇಟರ್‌ಗಳಾಗಿ, ವಾಟರಮನ್, ಸಿಪಾಯಿ, ಸ್ವಚ್ಛತಾಗಾರರು ಮತ್ತು ಸ್ವಚ್ಛವಾಹಿನಿ ಎಂಬ ಮಹಿಳಾ ಚಾಲಕಿ, ಸಹಾಯಕಿಯರನ್ನು ಒಳಗೊಂಡು ದುಡಿಯುತ್ತಿರುವ 63 ಸಾವಿರ ಜನರಿಗೆ ಕನಿಷ್ಠ 36 ಸಾವಿರ ವೇತನ ನಿಗದಿಗಾಗಿ ಒತ್ತಾಯಿಸಿ ಡಿ. 20 ರಂದು “ಬೆಂಗಳೂರು ಚಲೋ” ಚಳುವಳಿ ಹಮ್ಮಿಕೊಳ್ಳಲಾಗಿದೆ …

Read More »

ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ:ಬಸವಂತ ಕೋಣಿ

ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ:ಬಸವಂತ ಕೋಣಿ ಬೆಟಗೇರಿ:ಶ್ರೀದೇವಿಯ ಮೇಲೆ ನಂಬಿಕೆ ಇಟ್ಟು ನಡೆದುಕೊಂಡವರ ಇಷ್ಟಾರ್ಥಗಳನ್ನು ಇಡೇರಿಸುತ್ತಾಳೆ. ಶ್ರೀದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಡಿ.12 ರಂದು ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ, …

Read More »

ಓಂ ಅಕ್ಷರದಲ್ಲಿ ಶ್ರೀದೇವಿಯ ತ್ರೀಶೂಲ.!

ಓಂ ಅಕ್ಷರದಲ್ಲಿ ಶ್ರೀದೇವಿಯ ತ್ರೀಶೂಲ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ಕಾರ್ತಿಕೋತ್ಸವ ಆಚರಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ರಂಗೋಲಿ ಮೂಲಕ ಓಂ ಅಕ್ಷರದಲ್ಲ್ಲಿ ಶ್ರೀದೇವಿಯ ತ್ರೀಶೂಲ ಚಿತ್ರ ಬಿಡಿಸಿ, ಅದರಲ್ಲಿ ಚಿಕ್ಕ ದೀಪ ಹಚ್ಚಿ ಸಂಭ್ರಮಿಸಿದರು. ಇದು ನೋಡುಗರಲ್ಲಿ ಆಕರ್ಷಣಿಯವಾಗಿ ಕಾಣುತ್ತಿತ್ತು.

Read More »