ಬೆಳಗಾವಿ: ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿರುವ ನಿಯೋಜಿತ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆಯವರ ಆಯ್ಕೆ ನಿಶ್ಚಿತವೆಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಆಯೋಜಿತಗೊಂಡಿರುವ ನಿಪ್ಪಾಣಿ ಕ್ಷೇತ್ರದ ಪಿಕೆಪಿಎಸ್ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ಅಧಿಕಾರ ಚುಕ್ಕಾಣಿ ಹಿಡಿಯಲು ಈಗಾಗಲೇ ರಣತಂತ್ರಗಳನ್ನು ರೂಪಿಸಿದ್ದೇವೆ ಎಂದು …
Read More »Yearly Archives: 2025
ಬೆಟಗೇರಿಯಲ್ಲಿ ನವರಾತ್ರಿ ಮಹಾಸಡಗರ
*ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಸೆ.22 ರಿಂದ ಸ್ಥಳೀಯ ಮಹಿಳೆಯರಿಂದ ಶ್ರೀದೇವಿಯ ಆರಾಧನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಸೆ.22 ರಿಂದ 9 ದಿನಗಳ ಕಾಲ ಸ್ಥಳೀಯ ಮಹಿಳೆಯರು ಮತ್ತು ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳು ದಿನಕ್ಕೂಂದು ಬಣ್ಣದ ಸೀರೆಯುಟ್ಟು ನವೋಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. ದಿನ ಬೆಳಗಾಗುವಷ್ಟರಲ್ಲಿ ಗ್ರಾಮದ ಹೊರವಲಯದಲ್ಲಿರುವ ಬನ್ನಿ ಗಿಡಕ್ಕೆ ಶುಭ ಗಳಿಗೆಯಲ್ಲಿ ಪೂಜೆ, ಪುನಸ್ಕಾರ, ಗಿಡಕ್ಕೆ …
Read More »ಶ್ರೀ ಸಾಯಿ ಮಂದಿರದಲ್ಲಿ ವಿಶ್ವ ಹೃದಯ ದಿನಾಚರಣೆ
ಮೂಡಲಗಿ: ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಸಾಯಿ ಸೇವಾ ಸಮಿತಿಯಿಂದ ಹೃದಯ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಚಿಕ್ಕಮಕ್ಕಳ ತಜ್ಞ ಡಾ|| ವಿಶಾಲ ಪಾಟೀಲ ಚಾಲನೆ ನೀಡಿ ಮಾತನಾಡಿದ ಅವರು ಆಹಾರದಲ್ಲಿ ಮಿತವಾಗಿ ಎಣ್ಣೆ ಬಳಸಿ, ಕರೆದ ಪದಾರ್ಥಗಳಿಂದ ಹಾಗೂ ದುಶ್ಚಟಗಳಿಂದ ದೂರವಿರಿ, ನಿತ್ಯ ನಗೆ, ನಡಿಗೆ, ಪ್ರಾಣಾಯಾಮ ಯೋಗ ದೊಂದಿಗೆ ಸಾಯಿ ಧ್ಯಾನ ಮಾಡುತ್ತ ಉಲ್ಲಾಸ ಉತ್ಸಾಹದ ಜೀವನ ಸಾಗಿಸಿ …
Read More »‘ನಗದು ರಹಿತ ವೈದ್ಯಕೀಯ ಚಿಕಿತ್ಸೆ ಪ್ರಯೋಜನ ಪಡೆಯಿರಿ’- ಆನಂದ ಹಂಜ್ಯಾಗೋಳ
ಮೂಡಲಗಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್)ಯು ಬರುವ ಅ.1ರಿಂದ ಜಾರಿಗೆ ಬರಲಿದೆ. ಜಿಲ್ಲೆಯ ಸರ್ಕಾರಿ ನೌಕರರು ಇದರ ಪ್ರಯೋಜನ ಪಡೆಯಬೇಕು ಎಂದು ಸಂಘದ ತಾಲೂಕಾ ಘಟಕದ ಅಧ್ಯಕ್ಷ ಆನಂದ ಹಂಜ್ಯಾಗೋಳ ಹೇಳಿದ್ದಾರೆ. ಈ ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ಸರ್ಕಾರ ನಿಗದಿಪಡಿಸಿದ ವಂತಿಗೆಯನ್ನು ಮುಂದಿನ ತಿಂಗಳಿನಿಂದ ಪಾವತಿಸಬೇಕು. ಪತಿ-ಪತ್ನಿ ಇಬ್ಬರೂ …
Read More »ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಧಾರಾಕಾರ ಮಳೆ
ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಧಾರಾಕಾರ ಮಳೆ *ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ಶುಕ್ರವಾರ ಸೆ.26 ಮತ್ತು ಸೆ.27ರಂದು ಹಗಲುರಾತ್ರಿ ಧಾರಾಕಾರ ಸುರಿದ ಮಳೆಯಿಂದ ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಒಂದಡೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರೈತರಿಗೆ ಮಾಳೆಯಾಗಿ ಸಂತಸವಾದರೆ ಇನ್ನೂದಡೆ ಭೂಮಿಯಲ್ಲಿದ್ದ ಕೇಲವು ಬೆಳೆಗಳು ಸಂಪೂರ್ಣ ಹಾಳಾಗುವ ಆತಂಕ ಇಲ್ಲಿಯ ರೈತರಿಗೆ ಎದುರಾಗಿದೆ. ಈ ಮಳೆ ಹಗಲಿರುಳು ಬಿಡದೆ ಸುರಿದು ಗ್ರಾಮದ ಹಾಗೂ ಸುತ್ತಲಿನ …
Read More »ನಾವು ನಮ್ಮ ಲೆಕ್ಕವನ್ನು ತೋರಿಸಲು ಸಿದ್ಧರಿದ್ದೇವೆ. ನೀವೂ ಕೂಡ ಲೆಕ್ಕವನ್ನು ನೀಡಲು ಸಿದ್ಧರಿರಬೇಕು-ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹುಕ್ಕೇರಿ: ನಾವು ನಮ್ಮ ಲೆಕ್ಕವನ್ನು ತೋರಿಸಲು ಸಿದ್ಧರಿದ್ದೇವೆ. ನೀವೂ ಕೂಡ ಲೆಕ್ಕವನ್ನು ನೀಡಲು ಸಿದ್ಧರಿರಬೇಕು. ಈ ಚುನಾವಣೆಯೊಳಗೆ ಅಥವಾ ಚುನಾವಣೆ ಮುಗಿದ ಬಳಿಕ ನಾವುಗಳು ಮಾಡಿರುವ ಸಹಕಾರಿ ಸಂಸ್ಥೆಗಳ ಖರ್ಚು- ವೆಚ್ಚಗಳ ಕುರಿತು ಲೆಕ್ಕಪತ್ರ ನೀಡಲು ಯಾವಾಗ ಬೇಕಾದರೂ ನೀಡುತ್ತೇವೆ. ನೀವೂಗಳು ಸಹ ಲೆಕ್ಕಗಳನ್ನು ಸಾರ್ವಜನಿಕರ ಬಳಿ ಮುಂದಿಡುವಂತೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿರೋಧಿಗಳಿಗೆ ಸವಾಲು ಹಾಕಿದರು. ಗುರುವಾರದಂದು ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ …
Read More »ಕವಿಯಾದವನು ಸಮಾಜಕ್ಕೆ ಧ್ವನಿ ಯಾಗಬೇಕು ಹೊರತು ಪ್ರಶಸ್ತಿ ಮತ್ತು ಹೆಸರು ಮಾಡುವ ಗೀಳು ಇರಬಾರದು – ಡಾ.ಮಹಾದೇವ ಜಿಡ್ಡಿಮನಿ
ಮೂಡಲಗಿ : ಮೂಡಲಗಿ ತಾಲೂಕಿನ ಶಿವಾಪೂರ ಹ ಗ್ರಾಮದ ಶ್ರೀ ಚಿದಾನಂದ ಮ ಹೂಗಾರ ಗುರುಗಳ ಶ್ರೀ ಬಸವ ಆಶ್ರಮದಲ್ಲಿ ನವರಾತ್ರಿ ಉತ್ಸವ ನಿಮಿತ್ತವಾಗಿ ನಡೆದ ದಸರಾ ಕವಿಗೋಷ್ಠಿಯು ಬಹಳ ವಿಜೃಂಭಣೆಯಿಂದ ನಡೆಯಿತು. ದಸರಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಮಹಾದೇವ ಜಿಡ್ಡಿಮನಿಯವರು ಕವಿಯಾದವನು ಸಮಾಜಕ್ಕೆ ಧ್ವನಿ ಯಾಗಬೇಕು ಹೊರತು ಪ್ರಶಸ್ತಿ ಮತ್ತು ಹೆಸರು ಮಾಡುವ ಗೀಳು ಇರಬಾರದು ಎಂದು ಕವಿಗಳಿಗೆ ಕಿವಿ ಮಾತು ಹೇಳುತ್ತಾ ಲಿಂಗೈಕ್ಯ ಶರಣ ಶ್ರೀ …
Read More »ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀ ನಗರ ತೋಟದ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನದ ಪ್ರಯುಕ್ತ ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಕಾರ್ಯಕ್ರಮ ಸೆ.25ರಂದು ನಡೆಯಿತು. ಬೆಟಗೇರಿ ಗ್ರಾಮದ ಎಲ್ಲಾ 7 ಅಂಗನವಾಡಿ ಕೇಂದ್ರಗಳ ಸುತ್ತಮುತ್ತ ಹಾಗೂ ಮತ್ತೀತರ ಪ್ರಮುಖ ಸ್ಥಳಗಳಲ್ಲಿ ಕಸಗೊಡಿಸುವ ಮತ್ತು ಕೇಂದ್ರಗಳ ಮುಖ್ಯ ದ್ವಾರದ ಮುಂದೆ ವಿವಿಧ ಚಿತ್ರಗಳ ರಂಗೋಲಿ ಹಾಕಿದ ಬಳಿಕ ಸ್ವಚ್ಛತೆ ಕುರಿತು ಮಕ್ಕಳು ಮತ್ತು …
Read More »ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.25ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ …
Read More »ಶಿವಾಪೂರ ಹೂಗಾರ ಗುರುಗಳ ನವರಾತ್ರಿ ಉತ್ಸವದ ಸತ್ಸಂಗ ಕಾರ್ಯಕ್ರಮಕ್ಕೆ ಮೆರುಗು
ಮೂಡಲಗಿ : ಮೂಡಲಗಿ ತಾಲೂಕಿನ ಶಿವಾಪೂರ ಹ ಗ್ರಾಮದ ಶ್ರೀ ಚಿದಾನಂದ ಮ ಹೂಗಾರ ಗುರುಗಳ ಶ್ರೀ ಬಸವ ಆಶ್ರಮದಲ್ಲಿ ನವರಾತ್ರಿ ಉತ್ಸವ ಸತ್ಸಂಗ ಕಾರ್ಯಕ್ರಮ ತುಂಬಾ ವಿಜೃಂಭಣೆಯಿಂದ ನಡೆಯಿತು. ಒಂಭತ್ತು ದಿನಗಳ ಕಾಲ ನಿತ್ಯ ಶ್ರೀ ದೇವಿ ಪುರಾಣ ಪಾರಾಯಣ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ವಿಜಯ ದಶಮಿ ದಿನದಂದು ಶಮಿ ಪೂಜೆಯೊಂದಿಗೆ ದಸರಾ ಕಾರ್ಯಕ್ರಮಗಳು ಮಂಗಳಗೊಳ್ಳುವವು. ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಮಮದಾಪೂರದ …
Read More »
IN MUDALGI Latest Kannada News