Breaking News
Home / 2025 (page 6)

Yearly Archives: 2025

17ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.17ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಕಳೆದ ನ.10ರಂದು ನಿಗದಿಗೊಳಿಸಿದ್ದ ವಿಚಾರ ಸಂಕಿರಣವನ್ನು ಕಬ್ಬಿನ ದರ ನಿಗದಿಗಾಗಿ ರೈತರ ಹೋರಾಟವಿದ್ದ ಕಾರಣ ಮುಂದುಡಲಾಗಿತ್ತು. ಅರಭಾವಿ ಕಿತ್ತೂರ …

Read More »

ಮೂಡಲಗಿ:   ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.

ಮೂಡಲಗಿ- ಗುರ್ಲಾಪೂರದಲ್ಲಿ ಬುಧವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಜರುಗಿದ ಉಚಿತ ಕಾಲುಬಾಯಿ ರೋಗ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ದಿ. 3 ರಿಂದ ಆರಂಭವಾಗಿರುವ ಲಸಿಕಾ ಅಭಿಯಾನವು ಡಿಸೆಂಬರ್ 2ರ ತನಕ‌ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸುವಂತೆ ಪಶುಪಾಲಕರಲ್ಲಿ ಕೋರಿದರು. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲು ಬಾಯಿ ರೋಗವನ್ನು ನಿಯಂತ್ರಿಸುವುದು ಅವಶ್ಯವಾಗಿದೆ. ಇದನ್ನು ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ …

Read More »

*ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: – ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಯೂ ಅವರು ಸೂಚಿಸಿದರು. ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ ಇಲ್ಲವೇ ಜನವರಿ ತಿಂಗಳಲ್ಲಿ ಚುನಾವಣೆಯು ಘೋಷಣೆಯಾಗಬಹುದು. ಈ …

Read More »

ವಿದ್ಯಾರ್ಥಿ ಈರಯ್ಯ ಮತ್ತು ಅಮರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಬೆಟಗೇರಿ:ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ ಇಲಾಖಾ ಸಹಯೋಗದಲ್ಲಿ ಗೋಕಾಕ ಮಹರ್ಷಿ ವಾಲ್ಮಿಕಿ ಕ್ರೀಡಾಂಗಣದಲ್ಲಿ ಇತೀಚೆಗೆ ನಡೆದ 17 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗೋಕಾಕ ತಾಲೂಕಿನ ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಕುಮಾರ ಈರಯ್ಯ ಶಿವಲಿಂಗಯ್ಯ ಹಿರೇಮಠ ಇತನು 5 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರ ಅಮರ ಮುತ್ತೆಪ್ಪ ವಡೇರ ಇತನು ಚಕ್ರ ಎಸೆತ ಮತ್ತು ಹ್ಯಾಮರ್ ಎಸೆತ …

Read More »

ಒನಕೆ ಓಬವ್ವ ಕನ್ನಡ ನಾಡಿನ ಧೀರ ಮಹಿಳೆಯಾಗಿದ್ದಳು:ರಾಮಣ್ಣ ನೀಲಣ್ಣವರ

ಬೆಟಗೇರಿ: ಚಿತ್ರದುರ್ಗ ಕೋಟೆಯ ಪಾಳೆಯಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರ ಅಲಿಯ ಪಡೆಗಳೂಂದಿಗೆ ಏಕಾಂಗಿಯಾಗಿ ಹೋರಾಡಿದ ಧೀರ ಮಹಿಳೆಯಾಗಿದ್ದಳು ಎಂದು ಬೆಟಗೇರಿ ಯುವ ಮುಖಂಡ ರಾಮಣ್ಣ ನೀಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನ.11ರಂದು ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ವೀರ ವನಿತೆ ಒನಕೆ ಓಬವ್ವ ವೀರ ಯೋಧಿಯಾಗಿದ್ದು, ಓಬವ್ವಳ …

Read More »

ನ.12ರಿಂದ ನ.16ರ ವರೆಗೆ ಎಂಪಿಎಲ್-2025 ಕ್ರಿಕೆಟ್ ಟೂರ್ನಿ

ಮೂಡಲಗಿ: ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಇದೇ ನ. 12ರಿಂದ ನ.16ರ ವರೆಗೆ 5 ದಿನಗಳ ವರೆಗೆ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಾಮೆಂಟ್‍ವನ್ನು ಏರ್ಪಡಿಸಲಾಗಿದೆ ಎಂದು ಸಂಘಟಕರಾದ ಶಿವಾನಂದ ಗಾಡವಿ, ಮಲ್ಲು ಕುರಬಗಟ್ಟಿ ಹಾಗೂ ಸನ್ನಿತ ಸೋನವಾಲಕರ ಹೇಳಿದರು. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಇಡಲಾಗಿದ್ದು, ಪ್ರಥಮ ಬಹುಮಾನ ರೂ.51,001, ದ್ವಿತೀಯ ರೂ.30,001 ಹಾಗೂ ತೃತೀಯ …

Read More »

*ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ*

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಾಳೆ ಸೋಮವಾರ ಜರುಗಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಶನಿವಾರ ರಾತ್ರಿ ನಿರ್ದೇಶಕರ ಸಭೆ ನಡೆಸಿದರು. ನಾಳಿನ ಚುನಾವಣೆಯಲ್ಲಿ ನಮ್ಮ ಬಣದವರೇ ಎರಡೂ ಸ್ಥಾನಗಳನ್ನು ಅಲಂಕರಿಸಲಿದ್ದು, ನಮ್ಮವರೇ ಐದು ವರ್ಷಗಳ ಅಧಿಕಾರವನ್ನು ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 19 ರಂದು ಬೆಳಗಾವಿ …

Read More »

ವಿದ್ಯಾರ್ಥಿ ಶಂಕರಾನಂದ ಮುಧೋಳ,ವಿದ್ಯಾರ್ಥಿನಿ ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ವಿದ್ಯಾರ್ಥಿ ಶಂಕರಾನಂದ ಮುಧೋಳ,ವಿದ್ಯಾರ್ಥಿನಿ ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಬೆಟಗೇರಿ:ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ ಇಲಾಖಾ ಸಹಯೋಗದಲ್ಲಿ ಗೋಕಾಕ ಮಹರ್ಷಿ ವಾಲ್ಮಿಕಿ ಕ್ರೀಡಾಂಗಣದಲ್ಲಿ ಇತೀಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರ ಶಂಕರಾನಂದ ಮುಧೋಳ ಇತನು 800 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರಿ ಪ್ರಿಯಾಂಕಾ ತಡಸಿ 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ …

Read More »

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.!

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.! *ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಎರಡು ದಿನಗಳಿಂದ ಬೆಳಗ್ಗೆ ಸುಮಾರು ಎರಡ್ಮೂರು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿಳುತ್ತಿರುವದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ …

Read More »

ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ:ಬಸವಂತ ಕೋಣಿ

ಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ. ಹಲವು ಸ್ತರಗಳಲ್ಲಿ ಕನಕದಾಸರ ಸಾಧನೆ ಸ್ಮರಣೀಯವಾಗಿದೆ ಎಂದರು. …

Read More »