ಮೂಡಲಗಿ: ‘ಮನಸ್ಸು ಹಾಗೂ ಅಂತ:ಕರಣವನ್ನು ಅರಳಿಸುವ ಶಕ್ತಿ ಕಾವ್ಯ ಇರಬೇಕು’ ಎಂದು ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಇಲ್ಲಿಯ ಬೀರೇಶ್ವರ ದೇವಸ್ಥಾನದ ಪಟಾಂಗಣದಲ್ಲಿ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತು ಹಾಗೂ ಗುರ್ಲಾಪುರದ ಗೆಳೆಯರ ಬಳಗ ಜಂಟಿಯಾಗಿ ಏರ್ಪಡಿಸಿದ್ದ ಸಿದ್ದು ಶಾಬನ್ನವರ ಚೊಚ್ಚಲ ಕೃತಿ ಸಿರಿನಾಡು ಕರುನಾಡು ಕವನ ಸಂಕಲನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಕಾವ್ಯ ರಚನೆಯು ಕವಿಯ ಪರಿಪೂರ್ಣತೆಯನ್ನು ಸಾಕಾರಗೋಳಿಸುತ್ತದೆ ಎಂದರು. ಸಿದ್ದು ಶಾಬನ್ನವರ ಕವನ ಸಂಕಲನದಲ್ಲಿ …
Read More »Monthly Archives: ಫೆಬ್ರವರಿ 2026
ಫೆ.11ರಂದು ಬೆಟಗೇರಿ ಪಿಎಚ್ಸಿಯಲ್ಲಿ ವಿವಿಧ ರೋಗಗಳ ಉಚಿತ ತಪಾಸಣೆ ಶಿಬಿರ
ಫೆ.11ರಂದು ಬೆಟಗೇರಿ ಪಿಎಚ್ಸಿಯಲ್ಲಿ ವಿವಿಧ ರೋಗಗಳ ಉಚಿತ ತಪಾಸಣೆ ಶಿಬಿರ ಬೆಟಗೇರಿ:ಗೋಕಾಕ ಲಾಯನ್ಸ್ ಕ್ಲಬ್ ಹಾಗೂ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತಿ, ಗಜಾನನ ಯುವಕ ಮಂಡಳ, ಕರ್ನಾಟಕ ರಕ್ಷಣಾ ವೇದಿಕೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು,ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವರ್ಗ ಇವರ ಸಂಯುಕ್ತ ಆಶ್ರಯದಲ್ಲಿ ನುರಿತ ವೈದ್ಯ ತಂಡದೊಂದಿಗೆ ಉಚಿತ ಕಣ್ಣಿನ …
Read More »ಫೆ.12ರಂದು ಬೆಟಗೇರಿ ಸದ್ಗುರು ಸಿದ್ಧಾರೂಢರ ಸದ್ಭಭಕ್ತರಿಂದ ಹುಬ್ಬಳ್ಳಿ ಮಠಕ್ಕೆ ಪಾದಯಾತ್ರೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.12ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 11ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನಿಧ್ಯ, ಶರಣರಾದ ಮಲ್ಲಪ್ಪ ಪಣದಿ, ಸಿದ್ದಪ್ಪ ಹೊರಟ್ಟಿ, ಭಾಳಪ್ಪ ಕನೋಜಿ ನೇತೃತ್ವ …
Read More »ಬಿಡಿಸಿಸಿ ಬ್ಯಾಂಕಿನ ಠೇವಣಿ ಹಣ ಸಂಪೂರ್ಣ ಸುರಕ್ಷಿತವಾಗಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ: ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ
ಬೆಳಗಾವಿ: ಬಿಡಿಸಿಸಿ ಬ್ಯಾಂಕಿನ ಠೇವಣಿ ಹಣ ಸಂಪೂರ್ಣ ಸುರಕ್ಷಿತವಾಗಿದ್ದು, ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಠೇವಣಿ ವಿಚಾರದಲ್ಲಿ ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ ಕತ್ತಿ ಮತ್ತು ಡಾ. ಮಹಾಂತೇಶ ಕಡಾಡಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕಡಾಡಿ ಅವರಿಗೆ ನೋಟಿಸ್ ನೀಡಲಾಗಿದ್ದು, ರಮೇಶ …
Read More »ಫೆ. 10 ರಂದು ಶಂಕರ ಶಿವಾಚಾರ್ಯ ಶ್ರೀಗಳ ಜಾತ್ರೆ
ಫೆ. 10 ರಂದು ಶಂಕರ ಶಿವಾಚಾರ್ಯ ಶ್ರೀಗಳ ಜಾತ್ರೆ ತೊಂಡಿಕಟ್ಟಿ: ಸಮೀಪದ ಹೊಸಕೋಟಿ ಗ್ರಾಮದಲ್ಲಿ 1008 ಶ್ರೀ ಸೂರ್ಯ ಸಿ೦ಹಾಸನಾಧೀಶ ಶ್ರೀಮದ್ ಜಗದ್ಗುರು ಅಂಗೈಕ್ಯ ಶ್ರೀ ಶ್ರೀ ಶ್ರೀ ಶಂಕರ ಶಿವಾಚಾರ್ಯ ಮಹಾಸ್ವಾಮೀಜಿಗಳವರ ದ್ವಿತೀಯ ವರ್ಷದ ಜಾತ್ರಾ ಮಹೋತ್ಸವ ಫೆ. 10 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮಂಗಳವಾರ ಮುಂಜಾನೆ 06-00 ಘಂಟೆಗೆ ಶ್ರೀಮದ್ ಜಗದ್ಗುರು ಅಂಗೈಕ್ಯ ಶ್ರೀ ಶ್ರೀ ಶ್ರೀ ಶಂಕರ ಶಿವಾಚಾರ್ಯ ದೇವರ ಮೂರ್ತಿಗೆ ರುದ್ರಾಭಿಷೇಕ …
Read More »ಫೆ.೧೦ ರಂದು ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ
ಫೆ.೧೦ ರಂದು ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಮೂಡಲಗಿ: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಶ್ರೀ ಕೃಷ್ಣಪ್ಪ ಹ.ಸೋನವಾಲಕರ ಅವರ ೮೨ನೇ ಜನ್ಮ ದಿನಾಚರಣೆ ಅಂಗವಾಗಿ ೧೦ನೇ ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಕೆ.ಎಚ್. ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಮಂಗಳವಾರ ಫೆ.೧೦ ರಂದು ಮುಂಜಾಣೆ …
Read More »‘ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ’- ಮಲ್ಲಯ್ಯ ಸ್ವಾಮೀಜಿ
‘ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ’- ಮಲ್ಲಯ್ಯ ಸ್ವಾಮೀಜಿ ಮೂಡಲಗಿ: ‘ಭಜನಾ ಕಲಾವಿದ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ, ಭಜನೆಯಲ್ಲಿ ತಮ್ಮ ಬದುಕನ್ನು ಕಂಡುಕೊಂಡಿದ್ದರು’ ಎಂದು ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಗುಜನಟ್ಟಿ ಗ್ರಾಮದಲ್ಲಿ ನಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಲಾವಿದರು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಭಜನಾ ರತ್ನ ದಿ.ರಾಮಚಂದ್ರಪ್ಪ ಮುಕ್ಕಣ್ಣವರ ಅವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ ಗುಜನಟ್ಟಿ ಗಾಯನ ವೈಭವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ನಿಜಗುಣ ಶಿವಯೋಗಿಗಳು, …
Read More »‘ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು’- ಭರಮಣ್ಣ ಉಪ್ಪಾರ
‘ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು’- ಭರಮಣ್ಣ ಉಪ್ಪಾರ ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.5 ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಿಕೆ ಮಾಡಿಕೊಂಡು ಸಾಧನೆ ಮಾಡಬೇಕು’ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು. ಶನಿವಾರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಕರ್ನಾಟಕ ಸರ್ಕಾರವು ಸಚಿವ ಸ್ಥಾನಮಾನವನ್ನು ನೀಡಿ ಉನ್ನತಿಕರಣಗೊಳಿಸಿದ್ದರ ಹಿನ್ನೆಯಲ್ಲಿ ಅವರನ್ನು …
Read More »ಬೆಳಗಾವಿಯ ಬಸವರಾಜ ಜಕ್ಕನವರ ಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರಧಾನ
*ಬೆಳಗಾವಿಯ ಬಸವರಾಜ ಜಕ್ಕನವರ ಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರಧಾನ* ಬೆಳಗಾವಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಯನ್ನು ಬೆಳಗಾವಿಯ ಬಸವರಾಜ ಜಕ್ಕಣ್ಣವರ್ ಅವರಿಗೆ ನೀಡಿ ಗೌರವಿಸಲಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶ್ರೀ ಸಿದ್ದೇಶ್ವರ ವೇದಿಕೆಯಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ರಾಷ್ಟ್ರೀಯ ಯುವ ವೈಭವ …
Read More »ಬೆಟಗೇರಿ ಗ್ರಾಮದ ಯಲ್ಲಮ್ಮದೇವಿ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಯಲ್ಲಮ್ಮದೇವಿ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ವರದಿ: ಅಡಿವೇಶ ಮುಧೋಳ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿಯ ದೇವಸ್ಥಾನದ ಯಲ್ಲಮ್ಮ ದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.4ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, …
Read More »
IN MUDALGI Latest Kannada News