Breaking News
Home / Recent Posts / ಶ್ರೀ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಿವಾನುಭವ ಗೋಷ್ಠಿ

ಶ್ರೀ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಿವಾನುಭವ ಗೋಷ್ಠಿ

Spread the love

 

ಆಧ್ಯಾತ್ಮಿಕ ಚಿಂತನವು ಬದುಕಿನಲ್ಲಿ ಶಾಂತಿ, ನೆಮ್ಮದಿ ನೀಡುತ್ತದೆ

ಮೂಡಲಗಿ: ಮೂಡಲಗಿಯ ಕೆಇಬಿ ಪ್ಲಾಟ್‍ದಲ್ಲಿಯ ಶ್ರೀ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ 11ನೇ ಶಿವಾನುಭವ ಗೋಷ್ಠಿ ಜರುಗಿತು.
ಬೀಳಗಿ ತಾಲ್ಲೂಕಿನ ಚಿಕ್ಕ ಹಂಚಿನಾಳದ ಶಾಂತಾನಂದ ಸ್ವಾಮೀಜಿ ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿ ‘ಆಧ್ಯಾತ್ಮಿಕ ಚಿಂತನೆಯು ಮನುಷ್ಯನಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ನೀಡುವುದು’ ಎಂದರು.
ಇಟ್ನಾಳದ ಸಿದ್ಧೇಶ್ವರ ಶರಣರು ಮಾತನಾಡಿ ಬಡತನ, ಸಿರಿತನ, ಅಧಿಕಾರ ಇವು ಶಾಶ್ವತ ಅಲ್ಲ. ಬಡತನ, ಶ್ರೀಮಂತಿಕೆಯನ್ನು ಸಮಾನವಾಗಿ ಕಂಡುಕೊಂಡಾಗ ಮಾತ್ರ ಬದುಕಿನಲ್ಲಿ ನೆಮ್ಮದಿ. ಸಂಸಾರವನ್ನು ಸರಳವಾಗಿ ಮಾಡಿಕೊಂಡು ಜೀವನವನ್ನು ಸಾರ್ಥಕವಾಗಿಸಿಕೊಳ್ಳಬೇಕು’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ದುಂಡಪ್ಪ ಮಹಾರಾಜರು ಮಾತನಾಡಿ ‘ಭಕ್ತರು ಮತ್ತು ವಿವಿಧ ಮಠಗಳ ಶ್ರೀಗಳ ಸಹಕಾರದಿಂದ ದೇವಸ್ಥಾನ ಕಟ್ಟಡ ನಿರ್ಮಾಣವು ಸಾಗುತ್ತಲಿದೆ’ ಎಂದರು.
ಸಂಚಾಲಕ ಈಶ್ವರ ಗೊಲಶೆಟ್ಟಿ ಮಾತನಾಡಿ ಪ್ರತಿ ಅಮವಾಸೆಗೆ ಶಿವಾನುಭವ ಗೋಷ್ಠಿಯನ್ನು ಏರ್ಪಡಿಸುತ್ತಿದ್ದು, ಭಕ್ತರಿಂದ ಉತ್ತಮ ಸ್ಪಂದನೆ ಇದೆ ಎಂದರು.
ನಾಗಪ್ಪ ಯಲ್ಲಟ್ಟಿ, ರಾಮಚಂದ್ರ ಬಾಬನ್ನವರ, ಶಿವಾಜಿ ಮೇದಾರ ಮತ್ತಿತರರು ಇದ್ದರು.
ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.


Spread the love

About inmudalgi

Check Also

ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ – ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ