Breaking News
Home / Recent Posts / ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

Spread the love

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.
ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ ಸೇರಿದಂತೆ ಹಲವು ಅಧಿಕಾರಿಗಳು ಧರ್ಮಟ್ಟಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಮುಂಜಾಗೃತ ಕ್ರಮವಾಗಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ