Breaking News
Home / Recent Posts / ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

Spread the love

ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ್ಸ ಸಕ್ಕರೆ ಕಾರ್ಖಾನೆಯ ಸನ್ 2022-23ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ರಮಕ್ಕೆ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಚಾಲನೆ ನೀಡಿದರು.
ಸತೀಶ ಶುಗರ್ಸ ಸಂಸ್ಥೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಮಾತನಾಡಿ, ಸನ್ 2021-22 ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತಬಾಂದವರಿಗೆ ಈಗಾಗಲೇ ರೂ.2700/- ಗಳಷ್ಟು ದರವನ್ನು ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಎರಡನೇ ಕಂತಿನ ಹಣವನ್ನು ಘೋಷಣೆ ಮಾಡಲಾಗುವುದು. ಪ್ರಸಕ್ತ 2022-23 ಹಂಗಾಮಿನ ಮೊದಲ ದಿನವೇ ಉತ್ಸಾಹದಿಂದ 800 ವಾಹನಗಳಲ್ಲಿ ಸುಮಾರು 15000 ಮೆ.ಟನ್ ಕಬ್ಬನ್ನು ಪೂರೈಸುವ ಮೂಲಕ ರೈತ ಬಾಂದವರು ಕಾರ್ಖಾನೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಕಬ್ಬು ಪೂರೈಸಿದ ರೈತರಿಗೆ ವಿಳಂಬ ಮಾಡದೆ ಕಬ್ಬಿನ ಬಿಲ್ಲನ್ನು ಪಾವತಿ ಮಾಡುತ್ತಿದ್ದು, ಪ್ರಸಕ್ತ ಹಂಗಾಮಿನಲ್ಲಿಯೂ ಸಹ ಕಬ್ಬು ಪೂರೈಸಿದ ರೈತರ ಬ್ಯಾಂಕ ಖಾತೆಗಳಿಗೆ ಸಮಯಾನುಸಾರ ಕಬ್ಬಿನ ಬಿಲ್ಲನ್ನು ಜಮೆ ಮಾಡಲಾಗುವುದು ಎಂದು ತಿಳಿಸಿದ ಅವರು ಕಾರ್ಖಾನೆಗೆ ಕಬ್ಬು ಪೂರೈಸುವ ಸಮಸ್ತ ರೈತ ಬಾಂದವರು ಪ್ರಸಕ್ತ ಹಂಗಾಮಿನಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಕಾರ್ಖಾನೆಯ ಪ್ರಗತಿಗೆ ಸಹಕರಿಸಬೇಕೆಂದು ಸಭೆಯಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಗತಿಪರ ರೈತರಾದ ಭೀಮಪ್ಪಾ ರಡ್ಡಿ, ಮಲ್ಲಿಕಾರ್ಜುನ ಕಬ್ಬೂರ, ಅರ್ಜುನ ನಾಯಿಕವಾಡಿ, ಅಶೋಕ ಮಳಲಿ, ರವಿ ಸಣ್ಣಕ್ಕಿ, ಅಜ್ಜಪ್ಪಾ ಗಿರಡ್ಡಿ, ಮಹಾದೇವಪ್ಪಾ ಪತ್ತಾರ, ವಾಸಪ್ಪಾ ಪಂಡ್ರೋಳಿ, ಕೆಂಚಪ್ಪಾ ಶಿಂತ್ರಿ, ವಿಠ್ಠಲ ಹೊಸುರ, ಆಡಳಿತ ಮಂಡಳಿಯ ಹಿರಿಯ ಉಪಾಧ್ಯಕ್ಷ ಎಲ್.ಆರ್.ಕಾರಗಿ, ಪಿ.ಡಿ. ಹಿರೇಮಠ ಹಾಗೂ ಉಪಾಧ್ಯಕ್ಷರುಗಳಾದ ವಿ.ಎಮ್.ತಳವಾರ, ಎ.ಎಸ್.ರಾಣಾ, ಡಿ.ಆರ್.ಪವಾರ ಮತ್ತು ಕಾರ್ಖಾನೆಯ ಕಾರ್ಮಿಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ