Breaking News
Home / Recent Posts / ಬೆಳಗಾವಿ-ಮಣುಗೂರ ಎಕ್ಸ್‍ಪ್ರೆಸ್ ರೈಲು ಜ.17ರಿಂದ ಪ್ರಾರಂಭ : ಈರಣ್ಣ ಕಡಾಡಿ

ಬೆಳಗಾವಿ-ಮಣುಗೂರ ಎಕ್ಸ್‍ಪ್ರೆಸ್ ರೈಲು ಜ.17ರಿಂದ ಪ್ರಾರಂಭ : ಈರಣ್ಣ ಕಡಾಡಿ

Spread the love

ಬೆಳಗಾವಿ-ಮಣುಗೂರ ಎಕ್ಸ್‍ಪ್ರೆಸ್ ರೈಲು ಜ.17ರಿಂದ ಪ್ರಾರಂಭ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್‍ಪ್ರೆಸ್ ವಿಶೇಷ ರೈಲು (07335/07336) ಸೇವೆಯನ್ನು ಜ.17 ಮಂಗಳವಾರ ಬೆಳಗಾವಿಯಿಂದ ರೈಲು ಸಂಚಾರ ಪ್ರಾರಂಭವಾಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.
ಗುರುವಾರ ಜ.12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿಯಿಂದ ಹೈದರಾಬಾದ್ ಮುಂಬೈನಂತಹ ಪ್ರಮುಖ ನಗರಗಳಿಗೆ ಸಂಪರ್ಕಿಸಲು ರೈಲು ಸೇವೆಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಲಾಗಿತ್ತು. ನನ್ನ ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರೆ ಹಾಗೂ ರೈಲ್ವೆ ಇಲಾಖೆಗೆ ಅಭಿನಂದನೆಗಳನ್ನು ತಿಳಿಸಿದರು.
ಬೆಳಗಾವಿ-ಮಣುಗೂರ ಡೈಲಿ ಎಕ್ಸ್‍ಪ್ರೆಸ್ ವಿಶೇಷ ರೈಲು ಜ. 17 ರಿಂದ ಮಾ. 30 ರವರೆಗೆ ಬೆಳಗಾವಿಯಿಂದ ಮಧ್ಯಾಹ್ನ 1.10ಕ್ಕೆ ಹೊರಡುವ ಈ ರೈಲು ಮರುದಿನ ಮಧ್ಯಾಹ್ನ 12.50ಕ್ಕೆ ಮಣುಗೂರ ತಲುಪುವುದು. ಜ.18 ರಿಂದ ಮಣುಗೂರನಿಂದ ಮಧ್ಯಾಹ್ನ 3.40ಕ್ಕೆ ಹೊರಡುವ ರೈಲು ಮರುದಿನ ಮಧ್ಯಾಹ್ನ 3.55ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಖಾನಾಪೂರ, ಲೋಂಡಾ, ಅಳ್ಳಾವರ, ಧಾರವಾಡ, ಹುಬ್ಬಳಿ, ಗದಗ, ಕೊಪ್ಪಳ, ಹೊಸಪೇಟೆ, ತೋರಣಗಲ್ಲು, ದರೋಜಿ, ಬಳ್ಳಾರಿ, ಗುಂತಕಲ್ ಮಂತ್ರಾಲಯ ರೋಡ, ರಾಯಚೂರ, ಯಾದಗಿರಿ, ಚಿತ್ತಾಪುರ, ಲಿಂಗಂಪಲ್ಲಿ, ಸಿಕಂದರಾಬಾದ, ವಾರಂಗಲ್ಲ, ಭದ್ರಾಚಲಂ ರೋಡ ಮಾರ್ಗವಾ ಸಂಚರಿಸಲಿದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದ್ದು ಇನ್ನಷ್ಟು ವ್ಯಾಪಾರ ವಹಿವಾಟು ಹೆಚ್ಚಾಗುವ ನಿರೀಕ್ಷೆ ಇದೆ. ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಂಸದ ಈರಣ್ಣ ಕಡಾಡಿ ವಿನಂತಿಸಿದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ