Breaking News
Home / Recent Posts / ನೇತಾಜಿ ಕುರಿತು ಉಪನ್ಯಾಷ ನೀಡಿದ ಕನ್ನಡ ಪ್ರದ್ಯಾಪಕ ಪ್ರೊ.ಎ.ಎಸ್.ಮೀಶಿನಾಯಿಕ

ನೇತಾಜಿ ಕುರಿತು ಉಪನ್ಯಾಷ ನೀಡಿದ ಕನ್ನಡ ಪ್ರದ್ಯಾಪಕ ಪ್ರೊ.ಎ.ಎಸ್.ಮೀಶಿನಾಯಿಕ

Spread the love

ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರೊ.ಸಂಜಯ ಖೋತ ಹೇಳಿದರು.
ಸೋಮವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ಕೇಂದ್ರದಲ್ಲಿ ನೇತಾ ಸುಭಾಸ್ ಚಂದ್ರ ಬೋಸ್‍ರ 126 ನೇ ಜನ್ಮ ದಿನಾಚಾರಣೆಯ ನಿಮಿತ್ಯ ಏರ್ಪಡಿಸಿದ ಪುಸ್ತಕ ಪ್ರದರ್ಶನದಲ್ಲಿ ಮಾತನಾಡಿ ಅವರು ನೇತಾಜಿಯಂತಹ ದೇಶಕ್ಕೆ ಪ್ರಾಣ ತ್ಯಾಗ ಮಾಡಿದ ದಿಮಂತ ವ್ಯಕ್ತಿಗಳ ಜನ್ಮ ದಿನಾಚರಣೆ ನಿಮಿತ್ಯ ಗ್ರಂಥಾಲಯದಲ್ಲಿ ಅವರು ಕುರಿತು ಪುಸ್ತಕ ಪ್ರದರ್ಶನ ಏರ್ಪಡಿಸಿರುವುದು ಸ್ತುತ್ಸಾರ್ಹವಾದದ್ದು ಎಂದು ಶ್ಲಾಘಿಸಿದರು.
ನೇತಾಜಿ ಕುರಿತು ಉಪನ್ಯಾಷ ನೀಡಿದ ಕನ್ನಡ ಪ್ರದ್ಯಾಪಕ ಪ್ರೊ.ಎ.ಎಸ್.ಮೀಶಿನಾಯಿಕ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಚಳುವಳಿಯ ನೇತಾರರಾಗಿದ್ದ ಸುಭಾಸ ಚಂದ್ರ ಬೋಸ್ ಭಾರತೀಯರಿಗೆ ರಾಷ್ಟ್ರೀಯವಾದದ ಕಲ್ಪನೆ ಹಾಗೂ ಸ್ವಾತಂತ್ರ್ಯದ ಪ್ರಜ್ಞೆಯನ್ನು ಬೆಳೆಸಿದ ಮಹಾನ್ ನಾಯಕರಾಗಿದ್ದರು ಎಂದು ಸ್ಮರಿಸಿದರು.
ಕಾಲೇಜಿ ಪ್ರಾಚಾರ್ಯ ಎ.ಪಿ.ರಡ್ಡಿ, ಪ್ರದರ್ಶನ ಉದ್ಘಾಟಿಸಿದ ಗ್ರಂಥಪಾಲಕ ಬಸವಂತ ಬರಗಾಲಿ ಮತ್ತು ವಿದ್ಯಾರ್ಥಿ ಆರತಿ ನೂಲಿ ಅವರು ನೇತಾಜಿ ಕುರಿತು ಮಾತನಾಡಿದರು.
ಸಮಾರಂಭದಲ್ಲಿ ಉಪನ್ಯಾಸಕರಾದ ಪ್ರೊ.ಸಂಗಮೇಶ ಗುಜಗೊಂಡ, ಡಾ.ಬಿ.ಸಿ.ಪಾಟೀಲ, ಪ್ರೊ.ಜಿ.ವ್ಹಿ.ನಾಗರಾಜ, ಪ್ರೊ.ದೀಪಕ ಹವಳೆ, ಪ್ರೊ.ಎಸ್.ಕೆ.ಸವಸುದ್ದಿ, ಪ್ರೊ.ಸವಿತಾ ಕೊತ್ತಲ, ಮನೋಹರ ಲಮಾಣಿ ಮತ್ತಿತರರು ಇದ್ದರು.


Spread the love

About inmudalgi

Check Also

ಸಂಭ್ರಮದಿಂದ ನಾಗರ ಪಂಚಮಿ ಹಬ್ಬ ಆಚರಣೆ

Spread the loveSpread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ