Breaking News
Home / Recent Posts / ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ

ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ

Spread the love

 

ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ


ಮೂಡಲಗಿ: ಅನಾದಿ ಕಾಲದಿಂದಲೂ ವಿಜ್ಞಾನ ಬಳಕೆಯಲ್ಲಿದ್ದು ಆಯಾ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ರೂಪತಾಳಿ ಮಹೋನ್ನತ ಕೊಡುಗೆ ನೀಡುತಾ ಬಂದಿರುವ ಕುರುಹುಗಳೇ ನಮ್ಮ ಜನಪದ ಮತ್ತು ವಚನ ಸಾಹಿತ್ಯ ಹಾಗೆಯೇ ವಚನಕಾರರೇ ಸಮಾಜ ಪರಿವರ್ತನೆಯ ನಿಜ ಸಂಶೋಧಕ, ವಿಜ್ಞಾನಿಗಳೆಂದು ಉಪನ್ಯಾಸಕ,ಸಾಹಿತಿ, ಸಂಶೋಧಕ ಡಾ. ಮಹಾದೇವ ಪೆÇೀತರಾಜ ಅಭಿಪ್ರಾಯ ಪಟ್ಟರು.
ಅವರು ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮೂಡಲಗಿ ತಾಲೂಕಾ ಘಟಕದಿಂದ ಹಮ್ಮಿಕೊಂಡಿದ್ದ ಸಮಿತಿಯ “ಸಂಸ್ಥಾಪನಾ ದಿನಾಚರಣೆ ಮತ್ತು ಸದಸ್ಯತ್ವ ಅಭಿಯಾನ” ಸಮಾರಂಭದಲ್ಲಿ ಮಾತನಾಡಿದರು
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಮೂಡಲಗಿ ತಾಲೂಕಾ ಅಧ್ಯಕ್ಷ ಸಾಹಿತಿ ಬಸವರಾಜ ಭಜಂತ್ರಿ ಮಾತನಾಡಿ, ವಿಜ್ಞಾನವು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಬೌತಿಕ ರೂಪದಲ್ಲಿರುವ ಪ್ರತಿಯೊಂದು ನಾವೀನ್ಯ ರೂಪದ ವಸ್ತುವೂ ವಿಜ್ಞಾನದ ಬಳುವಳಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಸಮಿತಿಯ ಧ್ಯೇಯೋದ್ದೇಶಗಳನ್ನು ವಿವರಿಸಿ ವಿಜ್ಞಾನ ಚಳುವಳಿಯ ಹಿನ್ನಲೆಯನ್ನು ಮೆಲುಕು ಹಾಕಿದರು.
ಸಮಾರಂಭದಲ್ಲಿ ವಿಜ್ಞಾನ ಶಿಕ್ಷಕರಾದ ರಾಜು ಮರನೂರ ಅವರಿಂದ ಸದಸ್ಯತ್ವ ನಮೂನೆಯನ್ನು ಸ್ವೀಕಾರ ಮಾಡುವುದರ ಮೂಲಕ 2023 ನೇ ಸಾಲಿನ ವಿಶೇಷ ‘ಸದಸ್ಯತ್ವ ಅಭಿಯಾನ’ಕ್ಕೆ ಚಾಲನೆ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಆರ್.ಎಸ್.ಹುನ್ನೂರ ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಶಿಕ್ಷಕ ಪಿ.ಬಿ.ಕುಲಕರ್ಣಿ ಮತ್ತಿತರರು ಇದ್ದರು
ವಿಜ್ಞಾನ ಶಿಕ್ಷಕರಾದ ನಾಗರಾಜ ಗಡಾದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸದರಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ