ಮೂಡಲಗಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ದ್ರುವನಾರಾಯಣ ಅವರ ನಿಧನದ ಹಿನ್ನಲೆಯಲ್ಲಿ ಮಾ.15ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಅಂದು ರದ್ದು ಮಾಡಿ ಮಾ.17ಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ.
ಮಾ.15ರಂದು ಮೂಡಲಗಿಯ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದರು ಆದರೆ ದ್ರುವನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಕಾರ್ಯಕ್ರಮವನ್ನು ಮಾ.15ರ ಬದಲು 17ಕ್ಕೆ ಮುಂದೂಡಲಾಗಿದೆ ಮತ್ತು ಸಿದ್ದರಾಮಯ್ಯ ಅವರು ಮಾ.17ರಂದು ಮೂಡಲಗಿಗೆ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.
Home / Recent Posts / 15ರಂದು ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ರದ್ದು ಮಾಡಿ ಮಾ.17ಕ್ಕೆ ಮುಂದೂಡಲಾಗಿದೆ
Check Also
ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …
IN MUDALGI Latest Kannada News