ಮೂಡಲಗಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ದ್ರುವನಾರಾಯಣ ಅವರ ನಿಧನದ ಹಿನ್ನಲೆಯಲ್ಲಿ ಮಾ.15ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಅಂದು ರದ್ದು ಮಾಡಿ ಮಾ.17ಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ.
ಮಾ.15ರಂದು ಮೂಡಲಗಿಯ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದರು ಆದರೆ ದ್ರುವನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಕಾರ್ಯಕ್ರಮವನ್ನು ಮಾ.15ರ ಬದಲು 17ಕ್ಕೆ ಮುಂದೂಡಲಾಗಿದೆ ಮತ್ತು ಸಿದ್ದರಾಮಯ್ಯ ಅವರು ಮಾ.17ರಂದು ಮೂಡಲಗಿಗೆ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.
Home / Recent Posts / 15ರಂದು ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ರದ್ದು ಮಾಡಿ ಮಾ.17ಕ್ಕೆ ಮುಂದೂಡಲಾಗಿದೆ
Check Also
ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ
Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …
IN MUDALGI Latest Kannada News