Breaking News
Home / Recent Posts / ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ

ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ

Spread the love

ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ

ಘಟಪ್ರಭಾ: ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಪಾರ ಕೊಡುಗೆಗಳನ್ನು ನೀಡಿದ ಅರಭಾವಿ ದುರದುಂಡೇಶ್ವರ ಸಿದ್ದಸಂಸ್ಥಾನ ಮಠದ 11ನೇ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಶ್ರೀ ಸಿದ್ಧಲಿಂಗೇಶ್ವರ ಮಹಾ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಮತ್ತು ನಾಡಿನ ಭಕ್ತ ಸಮೂಹಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಶ್ರೀಮಠದ ಸದ್ಭಕ್ತರಾದ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.
ಜಿಲ್ಲೆಯ ಅತಿ ಪುರಾತನ ಮತ್ತು ಧಾರ್ಮಿಕ ಪರಂಪರೆ ಹೊಂದಿರುವ ದುರದುಂಡೇಶ್ವರ ಮಠವು ವಿವಿಧ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹ ನೀಡಿದ್ದಾರೆ ಮತ್ತು ಪುರಾಣ, ಪ್ರವಚನಗಳ ಮೂಲಕ ನಾಡಿನಲ್ಲಿ ಧಾರ್ಮಿಕ ಜಾಗೃತಿಯನ್ನು ಉಂಟು ಮಾಡಿದ್ದಾರೆ ಹಾಗೂ ತಮ್ಮ ವಿಧಾಯಕ ಕಾರ್ಯಗಳ ಮೂಲಕ ನಿರಂತರ ಚಟುವಟಿಕೆಗಳಿಂದ ಕೂಡಿದ ಶ್ರೀಗಳ ಅಗಲಿಕೆ ನಾಡಿನ ಸದ್ಬಕ್ತರಿಗೆ ತುಂಬಲಾರದ ಹಾನಿಯಾಗಿದ್ದು, ಪೂಜ್ಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಭಗವಂತ ಭಕ್ತರಿಗೆಲ್ಲಾ ನೀಡಲಿ ಎಂದು ಸಂಸದ ಈರಣ್ಣ ಕಡಾಡಿ ಸಂತಾಪ ಸೂಚಿಸಿದರು.

 


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ