Breaking News
Home / ಬೆಳಗಾವಿ / ಜಡಿಸಿದ್ಧೇಶ್ವರ ಸೊಸಾಯಿಟಿಗೆ ಮುರಿಗೆಪ್ಪ ಪಾಟೀಲ ಅಧ್ಯಕ್ಷ, ಶಂಕರ ಪತ್ತಾರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ಜಡಿಸಿದ್ಧೇಶ್ವರ ಸೊಸಾಯಿಟಿಗೆ ಮುರಿಗೆಪ್ಪ ಪಾಟೀಲ ಅಧ್ಯಕ್ಷ, ಶಂಕರ ಪತ್ತಾರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

Spread the love

ಮೂಡಲಗಿ: ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ಸೋಮವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರಿಗೆಪ್ಪ ಶಿವಲಿಂಗಪ್ಪ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಂಕರ ಕಾಳಪ್ಪ ಪತ್ತಾರ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧೀಕಾರಿ ಆನಂದ ಹೇರೆಕರ ತಿಳಿಸಿದ್ದಾರೆ.

ಈ ಸಮಯದಲ್ಲಿ ನಿರ್ದೇಶಕರಾದ ಚಂದ್ರಶೇಖರ ಅ.ಗಾಣಿಗೇರ, ಪ್ರಭಾಕರ ಬ.ನರಗುಂದ, ಬಸವರಾಜ ಶಿ.ಮದಬಾವಿ, ಶಿವಾನಂದ ಶಿ.ವಾಲಿ, ಬಸವರಾಜ ಲಿಂ.ಪಾಟೀಲ, ಬಾಗವ್ವ ಮಾ.ದೇವನಗಳ, ಕೆಂಪವ್ವಾ ವಿ.ಬಾಗೋಜಿ, ರವೀಂದ್ರ ಕ.ಕಮತಿ, ಭಿಮಣ್ಣಾ ಬಾ.ಹೊಟ್ಟಿಹೊಳಿ, ಮಾರುತಿ ಬಾ.ಭಜಂತ್ರಿ, ನಾಗರಾಜ ಕಾ.ಮಾಳಗಿ ಮತ್ತು ಗ್ರಾಮದ ಮುಖಂಡರು, ಸೊಸಾಯಿಟಿಯ ಪ್ರಧಾನ ಕಾರ್ಯದರ್ಶಿ ಮಹಾದೇವ ರಬಕವಿ, ಸಹ ಕಾರ್ಯದರ್ಶಿ ದುಂರದುಂಡೆಪ್ಪ ನಾವಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಸತ್ಕರಿಸಿ ಗೌರವಿಸಿದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ