Breaking News
Home / ಬೆಳಗಾವಿ / ಸಾಲ ಬಾಧೆಯಿಂದ ಬೇಸತ್ತು ನೇಕಾರ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸಾಲ ಬಾಧೆಯಿಂದ ಬೇಸತ್ತು ನೇಕಾರ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಮೂಡಲಗಿ : ಸಾಲ ಬಾಧೆಯಿಂದ ಬೇಸತ್ತು ನೇಕಾರ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗನೂರ ಪಟ್ಟಣದಲ್ಲಿ ಗುರುವಾರ ನಡೆದಿದೆ.
ನಾಗನೂರ ಪಟ್ಟಣದ ರಮೇಶ ಮರಿಜಾಡರ (37) ಎಂಬ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಮೇಶ ನೇಕಾರಿಕೆ ಉದ್ಯೋಗಕ್ಕಾಗಿ ಸಾಲ ಮಾಡಿದ್ದರು. ಉದ್ಯೋಗ ಸರಿಯಾಗಿ ನಡೆಯದೇ ನಷ್ಟ ಅನುಭವಿಸಿದ್ದರು. ಸಾಲಬಾಧೆಯಿಂದ ಬೇಸತ್ತಿದ್ದರು ಎನ್ನಲಾಗುತ್ತಿದೆ. ಗುರುವಾರ ಮುಂಜಾನೆ ನೇಕಾರಿಕೆ ಮಾಡುವ ಶೇಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮೂಡಲಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About inmudalgi

Check Also

ಇಟ್ನಾಳ ಗ್ರಾಮದಲ್ಲಿ ಆರ್‍ಡಿಎಸ್ ಪದವಿ ಮಹಾವಿದ್ಯಾಲಯದಿಂದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Spread the loveಮೂಡಲಗಿ : ಪಟ್ಟಣದ ಆರ್‍ಡಿಎಸ್ ಕಲಾ ವಾಣಿಜ್ಯ ವಿಜ್ಞಾನ ಹಾಗೂ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಹಾಗೂ ರಾಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ