Breaking News
Home / ಬೆಳಗಾವಿ /  ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 103ನೇ ಅನ್ನದಾಸೋಹ

 ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 103ನೇ ಅನ್ನದಾಸೋಹ

Spread the love

ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ಶಿವಯ್ಯ ದುಂಡಯ್ಯ ಹಿರೇಮಠ ಅವರ ಸ್ಮರಣೆಯಲ್ಲಿ 103ನೇÀ ಅನ್ನದಾಸೋಹವನ್ನು ಏರ್ಪಡಿಸಿದ್ದರು.
ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ನಿರ್ದೇಶಕ ಶ್ರೀಕಾಂತ ಹಿರೇಮಠ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‍ವು ರೋಗಿಗಳಿಗೆ ಅನ್ನದಾಸೋಹ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದರು.
ಅನ್ನದಾಸೋಹಿ ಈಶ್ವರಯ್ಯ ಶ್ರೀಶೈಲಯ್ಯ ನಂದಗಾಂವಮಠ ಅವರು ತಮ್ಮ ಅಜ್ಜನವರಾದ ದಿ. ಶಿವಯ್ಯ ದುಂಡಯ್ಯ ಹಿರೇಮಠ ಅವರ ಸ್ಮರಣೆಯಲ್ಲಿ ದಾಸೋಹ ಸೇವೆ ಮಾಡಿರುವರು.
ಅತಿಥಿಯಾಗಿ ಸಮುದಾಯ ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಸುಜಾತಾ ಶ್ರೀಕಾಂತ ಹಿರೇಮಠ, ಲಯನ್ಸ್ ಅಧ್ಯಕ್ಷ ವಿಶಾಲ ಶೀಲವಂತ, ವೆಂಕಟೇಶ ಸೋನವಾಲಕರ, ಈರಣ್ಣ ಕೊಣ್ಣೂರ, ಡಾ. ಪ್ರಕಾಶ ನಿಡಗುಂದಿ, ಶಿವಾನಂದ ಕಿತ್ತೂರ, ಸುರೇಶ ನಾವಿ, ಕೃಷ್ಣಾ ಕೆಂಪಸತ್ತಿ, ಶಿವಾನಂದ ಗಾಡವಿ, ಪ್ರಮೋದ ಪಾಟೀಲ, ಸಂಜಯ ಮೋಕಾಶಿ ಇದ್ದರು.
ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿದರು. ಲಯನ್ಸ್ ಕಾರ್ಯದರ್ಶಿ ಗಿರೀಶ ಅಸಂಗಿ ನಿರೂಪಿಸಿದರು.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ