Breaking News
Home / ಬೆಳಗಾವಿ / 19ನೇ ಶಿವಾನುಭವ ಗೋಷ್ಠಿ, ‘ಶುದ್ಧ ಕಾಯಕದಿಂದ ಜೀವನದಲ್ಲಿ ಸಂತೃಪ್ತಿ’

19ನೇ ಶಿವಾನುಭವ ಗೋಷ್ಠಿ, ‘ಶುದ್ಧ ಕಾಯಕದಿಂದ ಜೀವನದಲ್ಲಿ ಸಂತೃಪ್ತಿ’

Spread the love

ಮೂಡಲಗಿ: ‘ಪ್ರಾಮಾಣಿಕತೆ ಮತ್ತು ಶುದ್ಧ ಕಾಯಕದಿಂದ ಜೀವನದಲ್ಲಿ ಆನಂದ ಮತ್ತು ಸಂತೃಪ್ತಿ ದೊರೆಯುತ್ತದೆ” ಎಂದು ಅರಭಾವಿ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಅನ್ಯ ಮಾರ್ಗದಿಂದ ಮಾಡುವ ಗಳಿಕೆ ಕ್ಷಣಿಕ ತೃಪ್ತಿಯಾಗಿದ್ದು, ಅದು ಆತ್ಮವಂಚನೆಗೆ ಕಾರಣವಾಗುತ್ತದೆ ಎಂದರು.
ಶಿವಾನುಭವ ಗೋಷ್ಠಿಯಲ್ಲಿ ಚಿಂತನ ಮಾಡಿದ ಕಂಕಣವಾಡಿಯ ಮಾರುತಿ ಶರಣರು ಮಾತನಾಡಿ ಮನ:ಶುದ್ಧಿಗಾಗಿ ಮತ್ತು ಸದ್ವಿಚಾರಕ್ಕಾಗಿ ಆಧ್ಯಾತ್ಮಿಕ ಸಾಧನೆಯು ಉತ್ತಮ ಮಾರ್ಗವಾಗಿದೆ ಎಂದರು.
ಮನುಷ್ಯ ತಾನು ಕಾಲವಾಗುವ ಪೂರ್ವದಲ್ಲಿ ಸಮಾಜಮುಖಿಯಾಗಿ ಕಾರ್ಯ ಮಾಡುವ ಮೂಲಕ ಜೀವನ ಮುಕ್ತಿ ಪಡೆಯಬೇಕು ಎಂದರು.
ಶಿಕ್ಷಕ ಅಪ್ಪಾಸಾಹೇಬ ಕುರುಬರ ಅವರಿಂದ ಸಂಗೀತ ಜರುಗಿತು. ಬಳೋಬಾಳದ ಭಕ್ತರಿಂದ ದಾಸೋಹ ಸೇವೆ ಜರುಗಿತು.
ವಿ.ಕೆ. ನಾಯ್ಕ ಪ್ರಾಸ್ತಾವಿಕ ಮಾತನಾಡಿ ನಿರೂಪಿಸಿದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ