Breaking News
Home / ಬೆಳಗಾವಿ / 90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ

90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ

Spread the love

ಮೂಡಲಗಿ : ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮ ಸಂಸ್ಥೆಯ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ. ಯಲ್ಲಿ 90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಇದೆ ಆಗಷ್ಟ 17 ರಂದು ಬೆಳಿಗ್ಗೆ 9.00 ಗಂಟೆಗೆ ರವಿವಾರ ಗೋಕಾಕ ನಗರದ ಬ್ಯಾಳಿಕಾಟಾ ಹತ್ತಿರ ಇರುವ ಶೂನ್ಯ ಸಂಪಾನಮಠದ ಸಿದ್ದಲಿಂಗೇಶ್ವರ ಬಿ.ಸಿ.ಎ. ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಐ ಪೂರ್ವ ರಾಷ್ರ್ಟೀಯ ಸಂಯೋಜಕ ವಿಷ್ಣು ಲಾತೂರ ಹೇಳಿದರು,
ಶನಿವಾರ ಮೂಡಲಗಿಯಲ್ಲಿ ಆಯೋಜಿಸಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭದ ಸಾನಿಧ್ಯವನ್ನು ಶೂನ್ಯ ಸಂಪಾಧನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮೀಜಿಗಳು ವಹಿಸುವರು, ಸಮಾರಂಭಕ್ಕೆ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ರಮೇಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಸಂಸದೆ ಪ್ರಿಯಾಂಕ ಜಾರಕಿಹೊಳಿ, ತಹಶೀಲ್ದಾರ ಡಾ ಮೋಹನ ಬಸ್ಮೇ, ಬಿಈಓ ಬಳಿಗಾರ,ತರಬೇತುದಾರ ಮೋಹನ ಆಗಮಿಸುವರು ಎಂದರು,
ಕಾರ್ಯಕ್ರಮದಲ್ಲಿ ಯುಪಿಎಸ್ಸಿ ಪಾಸಾದ ಮೂವರನ್ನು ಸನ್ಮಾನಿಸಲಾಗುವುದು. ಅಂದು ಮುಂಜಾನೆ 9 ರಿಂದ ಸಂಜೆ 5 ಗಂಟೆವರಗೆ ಕಾರ್ಯಕ್ರಮದಲ್ಲಿ ನುರಿತ ತರಬೇತುದಾರರಿಂದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರೇರಣಾದಾಯಕ ತರಬೇತಿಯನ್ನು ನೀಡಲಾಗುತ್ತದೆ.ಕಳೆದ 7 ವರ್ಷದಿಂದ ಎಲ್ಲ ಸಮಾಜದ ಎಸ್,ಎಸ್ ಎಲ್ ಸಿ ಪಿಯುಸಿ 90ಕಿಂತ ಹೆಚ್ಚು ಅಂಕ ಪಡದು ಪಾಸಾದ ಸನ್ಮಾನಿಸಿಕೊಂಡು ಬಂದಿದ್ದೇವೆ ಈ ನಮ್ಮ ಸಂಸ್ಥೆಯಿಂದ ಎಂದ ಅವರು ಕಾರಣ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ. ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕೆ ಆಗಮಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಘಟನೆ ಪರವಾಗಿ ಜೆಸಿಐ ಗೋಕಾಕ ಪ್ರೆಸಿಡೆಂಟ್ ರಜನಿಕಾಂತ ಮಾಳೋದೆ ಹೇಳಿದರು
ದಿ:17ರಂದು ಬೆಳಗ್ಗೆ 8:00 ಘಂಟೆಯಿಂದ ಕಾರ್ಯಕ್ರಮದ ಸ್ಥಳದಲ್ಲಿ ರಿಜಿಸ್ಟ್ರೇಷನ್ ಕೌಂಟರ್ ಚಾಲು ಇರುತ್ತದೆ. ಅಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು/ಪಾಲಕರು ನಿಮ್ಮ ನಿಮ್ಮ ಮಾಕ್ಸ್ ಕಾರ್ಡ ಪ್ರತಿಯನ್ನು ನೀಡಿ ಅಥವಾ ಮಾಕ್ರ್ಸ ಕಾರ್ಡ ತೋರಿಸಿ ನೊಂದಣಿ ಮಾಡಿಸಿಕೊಳ್ಳಬೇಕು.ಹೆಚ್ಚಿನ ವಿವರಗಳಿಗಾಗಿ 9448225046,8088897688,8277538968 ಸಂಪರ್ಕಿಸಲು ವಿನಂತಿಸಿದ್ದಾರೆ,
ಈ ಸಮಯದಲ್ಲಿ ಜೆಸಿಐ ಸಂಸ್ಥೆಯ ಶೇಖರ ಉಳ್ಳೇಗಡ್ಡಿ,ಕೆ ಆರ್ ದಬಾಡಿ, ಯುವ ಮುಖಂಡ ಸುಭಾಸ ಗೂಡ್ಯಾಗೋಳ ಇದ್ದರು,

 


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ