ಕುಲಗೋಡ : ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆ ಮನ್ನಿಕೇರಿ ಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶ್ರೀ ಬಸವರಾಜ ಮುನವಳ್ಳಿ 20,000 ರೂಪಾಯಿ ನಗದು ಬಹುಮಾನ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಮಾರುತಿ ನಾಯ್ಕರ ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಕಳ್ಳಿಗುದ್ದಿ ಯ ಸದಸ್ಯರಾದ ಶ್ರೀ ಬಾಳಪ್ಪ ಗೌಡರ ಮತ್ತು ಇತರೆ ಸದಸ್ಯರು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು. ಶ್ರೀ ಮುಸ್ತಾಕ ಅಹಮ್ಮದ್, ಶ್ರೀ ಮುರುಗಪ್ಪ ಮೈಗೂರ ಹಾಗೂ ಅತಿಥಿ ಶಿಕ್ಷಕರು ಹಾಜರಿದ್ದರು.
