ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಭಜನಾ ಕಾರ್ಯಕ್ರಮ ಹಾಗೂ ಸಮುದಾಯ ಭವನ ಉದ್ಘಾಟನಾ ಸಮಾರಂಭ ಸೆ.18 ಮತ್ತು 19 ರಂದು ಜರುಗಲಿದೆ.
ಸ.18 ರಂದು ರಾತ್ರಿ 8ಕ್ಕೆ ಭಜನಾ ಕಾರ್ಯಕ್ರಮ ಜರುಗುವುದು, ಸೆ.19 ರಂದು ಬೆಳಿಗ್ಗೆ ಸದಾಶಿವ ಮುತ್ಯಾನ ಕರ್ತೃಗದ್ದುಗೆಗೆ ಮತ್ತು ಚಂದ್ರಗಿರಿದೇವಿ ಅಭಿಷೇಕ ಮತ್ತು ಗ್ರಾಮಸ್ಥರಿಂದ ಉಡಿ ತುಂಬುವ ಕಾರ್ಯಕ್ರಮ ಜರುಗುವುದು. ಅಂದು ಮುಂ.11 ಗಂಟೆಗೆ ಪ್ರವಚ, ಮಧ್ಯಾಹ್ನ 12 ಗಂಟೆಗೆ ನೂತನ ಸಮುದಾಯ ಭವನ ಉದ್ಘಾಟನೆ ಮತ್ತು 12-30 ರಿಂದ ಅನ್ನ ಪ್ರಸಾದ ಜರುಗುವುದು.
ಸಮಾರಂಭದಲ್ಲಿ ಕೊಲೂರು ಬಬಲಾದಿ ಮಠದ ಶ್ರೀ ವೇದಮೂರ್ತಿ ಚಿಕ್ಕಯ್ಯ ಮಹಾಸ್ವಾಮಿಜಿ, ನಾಗನೂರಿನ ಕಾವ್ಯಾಶ್ರೀ ಅಮ್ಮನವರು, ಶಾಸಕ ಬಾಂಲಚಂದ್ರ ಜಾರಕಿಹೊಳಿ, ಸಂಸದರಾದ ಜಗದೀಶ ಶೆಟ್ಟರ, ಈರಣ್ಣ ಕಡಾಡಿ, ಮಾಜಿ ಸಂಸದೆ ಮಂಗಳಾ ಅಂಗಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಮತ್ತಿತರರು ಭಾಗವಹಿಸುವರು.
Check Also
ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ
Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …
IN MUDALGI Latest Kannada News