ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ಅ. 21ರಂದು ಸಂಜೆ 6.30ಕ್ಕೆ ಅಮವಾಸ್ಯೆಯ ಶಿವಾನುಭವ ಗೋಷ್ಠಿಯು ಜರುಗಲಿದೆ.
ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು.
ಮುಖ್ಯ ಅತಿಥಿಗಳಾಗಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಶಿದ್ಧಲಿಂಗಪ್ಪ ಕಂಬಳಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕಬ್ಬೂರ, ಹುಬ್ಬಳ್ಳಿಯ ನೈರುತ್ಯ ರೈಲ್ವೆ ಇಲಾಖೆಯ ಲಲಿತಾ ಬೆಳವಿ, ಕೆಂಚಪ್ಪ ಅಂಬೆನ್ನವರ ಭಾಗವಹಿಸುವರು.
ಭಾರತೀಯ ಸಾಹಿತ್ಯ ಪರಿಷತ ವಿಭಾಗ ಸಂಯೋಜಕ ರಾಮಚಂದ್ರ ಕಾಕಡೆ ಅವರು ‘ಉರಿಲಿಂಗಪೆದ್ದಿ ವಚನಗಳು’ ಕುರಿತು ಉಪನ್ಯಾಸ ನೀಡುವರು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.