Breaking News
Home / ಬೆಳಗಾವಿ / 11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನವಾಗಿ ನೇಮಕಾತಿಯನ್ನು ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು.
ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಶಿಸ್ತು, ಸಂಯಮದಿಂದ ಕೆಲಸ ಮಾಡಿ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವಂತೆಯೂ ಅವರು ಇದೇ ಸಂದರ್ಭದಲ್ಲಿ ಕಾರ್ಯಕರ್ತೆಯರಿಗೆ ಕಿವಿಮಾತು ಹೇಳಿದರು.
ಅರಭಾವಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ 11 ಕಾರ್ಯಕರ್ತೆಯರು ಮತ್ತು 34 ಸಹಾಯಕಿಯರನ್ನು ಅತ್ಯಂತ ಪ್ರಾಮಾಣಿಕವಾಗಿ ಆಯ್ಕೆ ಮಾಡಲಾಗಿದೆ. ಇಲಾಖೆಯ ನಿಯಮದಂತೆ ವಿಧವೆಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ನಿಮ್ಮಲ್ಲಿರುವ ಪ್ರತಿಭೆಯೇ ಈ ಆಯ್ಕೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ 6 ವರ್ಷದೊಳಗಿನ ಮಕ್ಕಳ ಬೆಳವಣಿಗೆಯಲ್ಲಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಬಾಣಂತಿಯರಿಗೆ ಉತ್ತಮ ಗುಣಮಟ್ಟದ ಪೌಷ್ಟಿಕಾಂಶವನ್ನು ವಿತರಿಸಬೇಕು. ಎಲ್ಲ ಮಕ್ಕಳನ್ನು ಒಂದೇ ತೆರನಾಗಿ ನೋಡಬೇಕು.‌ಮಕ್ಕಳಲ್ಲಿ ತಾರತಮ್ಯ ಧೋರಣೆಯನ್ನು ಅನುಸರಿಸಬಾರದೆಂದು ಅವರು ಕಿವಿಮಾತು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದರು.
ನಂತರ ಶಾಸಕರನ್ನು ಇಲಾಖೆಯಿಂದ ಸತ್ಕರಿಸಲಾಯಿತು.
ಅರಭಾವಿ ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಮೇಲ್ವಿಚಾರಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ

Spread the loveಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಬೆಟಗೇರಿ:ಗ್ರಾಮದೇವತೆ ದ್ಯಾಮವ್ವದೇವಿ ಮಹಾನ ಆದಿಶಕ್ತಿದೇವಿಯಾಗಿದ್ದಾಳೆ. ತನ್ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ