Breaking News
Home / ತಾಲ್ಲೂಕು / ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ಮತ್ತು ಘಟಪ್ರಭಾ ನದಿಗೆ ನೀರು ಬಿಡುಗಡೆ : ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ಮತ್ತು ಘಟಪ್ರಭಾ ನದಿಗೆ ನೀರು ಬಿಡುಗಡೆ : ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

Spread the love

ಗೋಕಾಕ : ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಮಂಗಳವಾರ ಸಂಜೆಯಿಂದ ಘಟಪ್ರಭಾ ನದಿ ಮತ್ತು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿಗೆ 1.50 ಟಿಎಂಸಿ, ಜಿಆರ್‍ಬಿಸಿಗೆ 1.50 ಟಿಎಂಸಿ, ಘಟಪ್ರಭಾ ನದಿಗೆ 1.00 ಟಿಎಂಸಿ ಮತ್ತು ಸಿಬಿಸಿಗೆ 0.50 ಟಿಎಂಸಿ ನೀರನ್ನು ಜೂ.16 ರಿಂದ 23 ರವರೆಗೆ ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ 6.75 ಟಿಎಂಸಿ ನೀರು ಸಂಗ್ರಹವಿದ್ದು, ನಿನ್ನೆ ಸಂಜೆಯಿಂದ 4.50 ಟಿಎಂಸಿ ನೀರನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನದಿ ಮತ್ತು ಕಾಲುವೆಗಳಿಗೆ ಹರಿಸಲಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ