Breaking News
Home / ತಾಲ್ಲೂಕು / ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ಮತ್ತು ಘಟಪ್ರಭಾ ನದಿಗೆ ನೀರು ಬಿಡುಗಡೆ : ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ಮತ್ತು ಘಟಪ್ರಭಾ ನದಿಗೆ ನೀರು ಬಿಡುಗಡೆ : ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

Spread the love

ಗೋಕಾಕ : ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಮಂಗಳವಾರ ಸಂಜೆಯಿಂದ ಘಟಪ್ರಭಾ ನದಿ ಮತ್ತು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿಗೆ 1.50 ಟಿಎಂಸಿ, ಜಿಆರ್‍ಬಿಸಿಗೆ 1.50 ಟಿಎಂಸಿ, ಘಟಪ್ರಭಾ ನದಿಗೆ 1.00 ಟಿಎಂಸಿ ಮತ್ತು ಸಿಬಿಸಿಗೆ 0.50 ಟಿಎಂಸಿ ನೀರನ್ನು ಜೂ.16 ರಿಂದ 23 ರವರೆಗೆ ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ 6.75 ಟಿಎಂಸಿ ನೀರು ಸಂಗ್ರಹವಿದ್ದು, ನಿನ್ನೆ ಸಂಜೆಯಿಂದ 4.50 ಟಿಎಂಸಿ ನೀರನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನದಿ ಮತ್ತು ಕಾಲುವೆಗಳಿಗೆ ಹರಿಸಲಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.


Spread the love

About inmudalgi

Check Also

ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ – ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ