Breaking News
Home / Recent Posts / ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ಸ್ವಾಗತಾರ್ಹ – ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ಸ್ವಾಗತಾರ್ಹ – ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ

Spread the love

ಮೂಡಲಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಶ್ಲಾಘಿಸಿದರು.
ನ. 17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು ಅತ್ಯಂತ ಹಿಂದುಳಿದಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಈ ಸಮುದಾಯದಲ್ಲಿನ ಬಡವರು ಮತ್ತು ಹಿಂದುಳಿದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ