Breaking News
Home / Recent Posts / ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹೇಳಿದ ಮಾತಿನಂತೆ ನಡೆಯಬೇಕು- ಯುವ ಮುಖಂಡ ಈಶ್ವರ ಢವಳೇಶ್ವರ

ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹೇಳಿದ ಮಾತಿನಂತೆ ನಡೆಯಬೇಕು- ಯುವ ಮುಖಂಡ ಈಶ್ವರ ಢವಳೇಶ್ವರ

Spread the love

ಮೂಡಲಗಿ : ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹಲವಾರು ಸಭೆ ಸಮಾರಂಭಗಳಲ್ಲಿ ಪಂಚಮಸಾಲಿ ಸಮಾಜದ ಋಣದ ಭಾರ ನನ್ನ ಮೇಲೆ ಬಹಳ ಇದೆ ಎಂದು ಹೇಳಿದ್ದಾರೆ ಹೇಳಿದ ಮಾತಿನಂತೆ ನಡೆಯಬೇಕೆಂದು ಮೂಡಲಗಿ ಪಂಚಮಸಾಲಿ ಯುವ ಮುಖಂಡ ಈಶ್ವರ ಢವಳೇಶ್ವರ ಹೇಳಿದರು.

ರವಿವಾರದಂದು ಪತ್ರಿಕಾ ಪ್ರಕಟಣೆ ನೀಡಿದ ಅವರು ಪಂಚಮಸಾಲಿ ಸಮಾಜದ ರೈತಾಪಿ, ಕೂಲಿ ಕಾರ್ಮಿಕರ, ಬಡವರ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿಯನ್ನು ಘೋಷಣೆ ಮಾಡಿ ನಿಮ್ಮ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಸಮಾಜದ ಋಣವನ್ನು ತೀರಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪಂಚಮಸಾಲಿ ಸಮಾಜದ ಜನರು 2ಎ ಮೀಸಲಾತಿಯನ್ನು ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಪತ್ರಚಳುವಳಿ ಪ್ರಾರಂಭಿಸಬೇಕೆಂದು ಈಶ್ವರ ಢವಳೇಶ್ವರ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ