Breaking News
Home / Recent Posts / ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

Spread the love

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಜಾರಕಿಹೊಳಿ ಅಭಿಮಾನಿಗಳು ಗ್ರಾಮದ ಬಸ್ವೇಶ್ವರ ವೃತ್ತದಲ್ಲಿ ಟಾಯರಗೆ ಬೆಂಕಿ ಹಚ್ಚಿ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿ ಗ್ರಾ.ಪಂ ಪಿಡಿಒ ಮುಖಾಂತರ ಸರಕಾರಕ್ಕೆ ಮನವಿಸಲ್ಲಿಸಿದರು
ಈ ಸಮಯದಲ್ಲಿ ಯಾದವಾಡ ಗ್ರಾ.ಪಂ ಸದಸ್ಯ ಕಲ್ಮೇಶ ಗಾಣಗೇರ ಮಾತನಾಡಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಅಶೀಲ ಸಿಡಿ ಬೀಡುಗಡೆ ಮಾಡಿ ಜಾರಕಿಹೊಳಿ ಅವರ ರಾಜಕೀಯ ತೆಜೋವದೆ ಮಾಡಿರುವರ ಮೇಲೆ ಸರಕಾರ ನಿಗಾವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಸಿಬಿಐ ಯಿಂದ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತಂದು ಜಾರಕಿಹೊಳಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹನಮಂತ ಹಾವನ್ನವರ, ರಮೇಶ ಜಾರಕಿಹೊಳಿ ಅವರ ಜನಪ್ರೀಯತೆಯನ್ನು ಸಹಿಸದ ಕೆಲ ಪ್ರಭಾವಿ ವ್ಯಕ್ತಿಗಳು ಷಡ್ಯಂತ್ರ ರೂಪಿಸಿದ್ದು, ಸಿ.ಡಿ.ಬಗ್ಗೆ ಸತ್ಯ ಸಂಗತಿ ಹೊರಬರಬೇಕೆಂದು ಆಗ್ರಹಿಸಿದರು.
ಈ ಸಮಯದಲ್ಲಿ ಬಸವರಾಜ ಕೇರಿ, ರಂಗಪ್ಪ ಇಟನ್ನವರ, ಶಂಕರ ಬೆಳಗಲಿ, ರಮೇಶ ಉದಪುಡಿ, ಸುರೇಶ ಸಾವಳಗಿ, ಹನಮಂತ ಹಾವನ್ನವರ, ದರೆಪ್ಪ ಮೂಧೋಳ, ನಾಗಪ್ಪ ಹಡಪದ, ಮಲ್ಲಪ್ಪ ಕೌಜಲಗಿ ಮತ್ತಿತರು ಇದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ