Breaking News
Home / Recent Posts / ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜೀತ ಅಭ್ಯರ್ಥಿಗಳಿಂದ ಮನವಿ

ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜೀತ ಅಭ್ಯರ್ಥಿಗಳಿಂದ ಮನವಿ

Spread the love

ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ
ಮರು ಚುನಾವಣೆ ನಡೆಸುವಂತೆ ಬಿಜೆಪಿ ಪರಾಜೀತ ಅಭ್ಯರ್ಥಿಗಳಿಂದ ಮನವಿ

ಮೂಡಲಗಿ:ಅರಭಾಂವಿ ಮತಕ್ಷೇತ್ರದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಡಿ-27 ರಂದು ನಡೆದ ನಂತರ ಮೂಡಲಗಿ ಶ್ರೀ ಶಿವಬೋಧರಂಗ ಕಾಲೇಜಿನ ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ ಎಂದು ಬುಧವಾರ ನಗರದ ತಹಶೀಲ್ದಾರ ಕಚೇರಿ ಎದುರು ಕಲ್ಲೋಳಿ ಪಟ್ಟಣದ ನೂರಾರು ಬಿಜೆಪಿ ಕಾರ್ಯಕರ್ತರು ತಹಶೀಲ್ದಾರಿಗೆ ಮನವಿ ಸಲ್ಲಿಸಿ, ಮರು ಚುನಾವಣೆ ನಡೆಸಬೇಕೇಂದು ಆಗ್ರಹಿಸಿದರು.

ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಮತಯಂತ್ರ ಬದಲಾವಣೆಯಾಗಿ ಚುನಾವಣೆ ಅಕ್ರಮವಾಗಿದೆ ಎಂದು ಸಂಶಯವಿದ್ದು ಡಿ-27 ರಿಂದ ಸಂಜೆ 6-00 ಗಂಟೆಯಿಂದ ಡಿ-30 ರ ಮಧ್ಯಾಹ್ನ 12-00 ಗಂಟೆವರೆಗೆ ಸ್ಟ್ರಾಂಗ್À ರೂಮನಲ್ಲಿ ಅಳವಡಿಸಿರುವ ಸಿಸಿಟಿವಿ ಪೂಟೇಜ್ ಮತ್ತು ಸ್ಟ್ರಾಂಗ ರೂಮ ಬಾಗಿಲ ಲಾಕ್ ಮಾಡುವುದು, ಸ್ಟ್ರಾಂಗ ರೂಮ ಬಾಗಿಲ ತೆಗೆಯುವುದು ವಿಡಿಯೋ ಪೊಟೇಜ್ ನೀಡುವಂತೆ ತಹಶೀಲ್ದಾರಿಗೆ ಒತ್ತಾಯಿಸಿದರು.

ಮತದಾರರು ಈ ವಾರ್ಡಿನಿಂದ ಆ ವಾರ್ಡಿಗೆ ಹೆಸರು ಸೇರ್ಪಡೆ ಆಗಿವೆ ಅವುಗಳ ಬಗ್ಗೆ ಬಿಎಲ್‍ಒ ಗಮನ ಸೇಳೆದರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಸಿಸಿಟಿವಿ ಪೂಟೇಜ್ ಈ ಬಗ್ಗೆ ಬೇಗ ಮಾಹಿತಿ ಸಿಗಬೇಕು ಇಲ್ಲದಿದ್ದರೆ ಮುಂದಿನ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಮುಖ ಬಸವರಾಜ ಕಡಾಡಿ, ರಾವಸಾಹೇಬ ಬೆಳಕೂಡ, ಅಜೀತ ಬೆಳಕೂಡ ಎಚ್ಚರಿಸಿದರು.
ಈ ಸಂದರ್ಬದಲ್ಲಿ ಪರಾಜೀತ ಅಭ್ಯರ್ಥಿಗಳಾದ, ಪ್ರಭು ಕಡಾಡಿ, ಅಶೋಕ ಮಕ್ಕಳಗೇರಿ, ಶಿವಪ್ಪ ಬಿ.ಪಾಟೀಲ, ಧರೇಪ್ಪ ಖಾನಗೌಡ, ಅಕ್ಷತಾ ಹುಗಾರ, ಗೀತಾ ನೀಲಪ್ಪ ಮುಂಡಿಗನಾಳ, ಭಾಗ್ಯಶ್ರೀ ಆಡಿನವರ, ಪಾರ್ವತಿ ಚೌಗಲಾ, ಉಮೇಶ ಬಿ.ಪಾಟೀಲ, ಬಸವರಾಜ ಭಜಂತ್ರಿ, ರೇಣುಕಾ ಇಮ್ಮಡೇರ. ಪ್ರಮುಖರಾದ ಹಣಮಂತ ಸಂಗಟಿ, ಈರಣ್ಣ ಮೂನೊಳಿಮಠ, ಭೀಮರಾಯ ಕಡಾಡಿ, ಶಿವಾನಂದ ಹೆಬ್ಬಾಳ, ಮಲ್ಲೇಶ ಗೋರೋಶಿ, ಶಿವಾನಂದ ಕಡಾಡಿ, ರಾಮಲಿಂಗ ಬಿ.ಪಾಟೀಲ, ಕೃಷ್ಟಾ ಮುಂಡಿಗನಾಳ, ಘೂಳಪ್ಪ ಮೇಟಿ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತಿ ಇದ್ದರು.

 


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ