Breaking News
Home / ಬೆಳಗಾವಿ / ‘ಅಕ್ಕಮಹಾದೇವಿ ವೈರಾಗ್ಯ, ಭಕ್ತಿಗೆ ಹೊಸ ಭಾಷೆ ಬರೆದ ಶರಣೆ’- ಸಾಹಿತಿ ಡಾ. ರತ್ನಾ ಎಫ್. ಬಾಳಪ್ಪನವರ

‘ಅಕ್ಕಮಹಾದೇವಿ ವೈರಾಗ್ಯ, ಭಕ್ತಿಗೆ ಹೊಸ ಭಾಷೆ ಬರೆದ ಶರಣೆ’- ಸಾಹಿತಿ ಡಾ. ರತ್ನಾ ಎಫ್. ಬಾಳಪ್ಪನವರ

Spread the love

ಮೂಡಲಗಿ: ‘ಅಕ್ಕಮಹಾದೇವಿ 12ನೇ ಶತಮಾನದಲ್ಲಿ ಸ್ತ್ರೀವಾದಿ ಚಳುವಳಿಯ ಪ್ರತಿಪಾದಕಿಯಾಗಿ ಶರಣ ಚಳುವಳಿಯ ದಿಟ್ಟ ಶರಣೆಯಾಗಿ ಗುರುತಿಸಿಕೊಂಡಿದ್ದಳು’ ಎಂದು ಹಿಡಕಲ್‍ದ ಸಾಹಿತಿ ಡಾ. ರತ್ನಾ ಎಫ್. ಬಾಳಪ್ಪನವರ ಹೇಳಿದರು.

ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ ಮಾಸಿಕ ಶಿವಾನುಭವ ಗೋಷ್ಠಿಂiÀಲ್ಲಿ ಅಕ್ಕಮಹಾದೇವಿ ಜೀವನ ಕುರಿತು ಉಪನ್ಯಾಸ ನೀಡಿದ ಅವರು ಲೌಕಿಕ ಜಗತ್ತನ್ನು ದಿಕ್ಕರಿಸಿ ವೈರಾಗ್ಯ ಮತ್ತು ಭಕ್ತಿಗೆ ಹೊಸ ಭಾಷೆ ಬರೆದ ಶರಣೆ ಎಂದರು.
.ಸಾನ್ನಿಧ್ಯವಹಿಸಿದ್ದ ಅರಭಾವಿ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಮಾತನಾಡಿ ‘ಸದೃಢ ಮನಸ್ಸು ಸ್ವಚ್ಛ ವಿಚಾರಗಳಿದ್ದರೆ ಉನ್ನತಕ್ಕೆ ಏರಲು ಸಾಧ್ಯವಾಗುತ್ತದೆ. ಅಕ್ಕಮಹಾದೇವಿ ಮನಸ್ಸು, ಗುರಿ ಸದೃಢ ಮತ್ತು ಅಚಲವಾಗಿದ್ದರಿಂದ
ಗುಜನಾಳದ ಪಿಡಿಒ ಸುನೀಲ ಜಮಖಂಡಿ, ಅರಭಾವಿಯ ನಿವೃತ್ತ ಶಿಕ್ಷಕ ಬಿ.ಎಂ. ಮಾಳಗಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಂಕರ ಬಿಲಕುಂದಿ ಅವರನ್ನು ಸನ್ಮಾನಿಸಿದರು.
ಶಿಕ್ಷಕ ಅಪ್ಪಾಸಾಹೇಬ ಕುರುಬರ ಅವರಿಂದ ಸಂಗೀತ ಜರುಗಿತು. ವಿ.ಕೆ. ನಾಯ್ಕ ಪ್ರಾಸ್ತಾವಿಕ ಮಾತನಾಡಿ ನಿರೂಪಿಸಿದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ