Breaking News
Home / inmudalgi

inmudalgi

ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ : ರಮೇಶ ಅಳಗುಂಡಿ

ಬೆಟಗೇರಿ:ಭಾರತ ಸಂವಿಧಾನವು ಭಾರತೀಯ ಪ್ರಜಾಪ್ರಭುತ್ವ ಭದ್ರ ಬುನಾದಿಯಾಗಿದೆ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿದಿದೆ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ ಎಂದರು. ಸ್ಥಳೀಯ ಪ್ರೌಢ ಶಾಲೆಯ ಅತಿಥಿಶಿಕ್ಷಕ ಮಂಜುನಾಥ ಸವತಿಕಾಯಿ …

Read More »

ಶಾಲಾ ಮಕ್ಕಳಲ್ಲಿ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಮ್.ಬಿ.ನಾಯ್ಕರ

ಬೆಟಗೇರಿ:ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳಬೇಕು, ಇಂದಿನ ಯುಗದಲ್ಲಿ ಶಾಲಾ ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಸಿಆರ್‍ಪಿ ಎಮ್.ಬಿ.ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಇತ್ತೀಚೆಗೆ ನಡೆದ ಬೆಟಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಳಿಕ ಮುಖ್ಯಅತಿಥಿಗಳಾಗಿ ಮಾತನಾಡಿ, ಶಾಲಾ ಮಕ್ಕಳಲ್ಲಿ …

Read More »

ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 3 ಕೋಟಿ ಆಡಳಿತಾತ್ಮಕ ಅನುಮೋದನೆ – ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ  ಜಾರಕಿಹೊಳಿಯವರು ಹೇಳಿದರು. ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು. …

Read More »

ಕಲ್ಲೋಳಿ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿ

ಮೂಡಲಗಿ: ಉತ್ತರ ಕರ್ನಾಟಕದ ಮತ್ತು ಜಿಲ್ಲೆಯ ಜಾಗೃತ ದೇವರಾದ  ಮೂಡಲಗಿ ತಾಲೂಕಿನ ಕಲ್ಲೋಳಿಯ ಶ್ರೀ ಹಣಮಂತ ದೇವರ ಜಾತ್ರಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವಕ್ಕೆ ಸಾರಿಗೆ ಇಲಾಖೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕಲ್ಲೋಳಿ ಯುವಜನ ಸೇವಾ ಸಂಘದ ಅಧ್ಯಕ್ಷರು ಶ್ರೀ ಪರಶುರಾಮ ಇಮಡೇರ  ಸಾರಿಗೆ ಇಲಾಖೆಯವರಿಗೆ ಮನವಿ ಮಾಡಿದ್ದಾರೆ. ಡಿ.6-ರಿಂದ 13- ವರೆಗೆ ಜರಗುವುದು. ಜಾತ್ರೆಗೆ ಗೋಕಾಕ, ರಾಯಬಾಗ, ಅಥಣಿ, ಹಾಗೂ ಹುಕ್ಕೇರಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ …

Read More »

25 ರಂದು ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ

  ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ ಮೂಡಲಗಿ: ಇಲ್ಲಿಯ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಂಘದಲ್ಲಿ ನ. 25ರಂದು ಮಧ್ಯಾಹ್ನ 12ಕ್ಕೆ ಜಾನಪದ ವಿದ್ಯಾಂಸ ಸಿ.ಕೆ. ನಾವಲಗಿ ಅವರ ವಿಮರ್ಶಾ ಕೃತಿ ‘ಆನಂದ ಕಂದರ ಸಾಹಿತ್ಯ ಒಂದು ಅನುಸಂದಾನ’ ಬಿಡುಗಡೆಯಾಗಲಿದೆ. ಕೃತಿಯನ್ನು ಕಸಾಪ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ ಕಂ ಬಾರ ಇವರು ಬಿಡುಗಡೆ ಮಾಡುವರು. ಕೃತಿ ಕುರಿತು ಕನ್ನಡ ಪ್ರಾಧ್ಯಾಪಕ …

Read More »

ನೂತನವಾಗಿ ನಿರ್ಮಿಸಿರುವ ನಾಡ ಕಚೇರಿಯನ್ನು ಉದ್ಘಾಟಿಸಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

*ಕೌಜಲಗಿ.* (ತಾ.ಗೋಕಾಕ) ಕೌಜಲಗಿ ಭಾಗದ ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲು ನಾಡ ಕಚೇರಿಯನ್ನು ಸ್ವಂತ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ, ಇಲ್ಲಿನ ಬಸ್ ನಿಲ್ದಾಣದ ಬಳಿ (ಅಂಬೇಡ್ಕರ್ ವೃತ್ತ ಹತ್ತಿರ) 20 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ನಾಡ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ಇದರ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಈ ಭಾಗದ ಜನಪ್ರಿಯ ಶಾಸಕರಾದ …

Read More »

ಅಕ್ಷತಾ ಖಣದಾಳೆ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೂಡಲಗಿ : ಮೂಡಲಗಿಯ ವಿಬಿಎಸ್‍ಎಂ ಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿನಿಯನ್ನು ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾದ್ಯರಾದ ಸಂಗಮೇಶ ಹಳ್ಳೂರ ಮಾರ್ಗದರ್ಶಕರಾದ ಪ್ರಕಾಶ ಹುಣಶೀಗಿಡದ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.  

Read More »

ನ.22ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ನ.22ರಿಂದ ನ.23 ರವರೆಗೆ ನಡೆಯಲಿವೆ. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಗೋಸಬಾಳ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನ.22ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಜಾಗೃತ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಹೋಮ, …

Read More »

ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ

ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಬುಧವಾರ ನ-19 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ …

Read More »

ನ. 20ರಂದು ಅರಭಾವಿ ಮಠದಲ್ಲಿ ಶಿವಾನುಭವ ಗೋಷ್ಠಿ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ನ.20ರಂದು ಸಂಜೆ 6.30ಕ್ಕೆ ಅಮವಾಸ್ಯೆಯ ಶಿವಾನುಭವ ಗೋಷ್ಠಿಯು ಜರುಗಲಿದೆ. ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕ ಸರ್ಕಾರಿ ಪ್ರೌಢ ಶಾಲೆಯ ತವನಪ್ಪ ಬಿಲ್ ‘ನಿಜ ರಾಷ್ಟ್ರ ನಿರ್ಮಾತೃ ಅನ್ನದಾತ’ ವಿಷಯ ಕುರಿತು ಉಪನ್ಯಾಸ ನೀಡುವರು. ಹಾರೂಗೇರಿಯ ಇಂಚಗೇರಿ ಮಠದ ಪೀಠಾಧಿಪತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ಕರ್ನಾಟ ರಾಜ್ಯ …

Read More »