Breaking News
Home / inmudalgi

inmudalgi

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂನ್.5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು …

Read More »

ಆರ್.ಡಿ.ಎಸ್. ಸಿಬಿಎಸ್‍ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “

ಆರ್.ಡಿ.ಎಸ್. ಸಿಬಿಎಸ್‍ಇ ಶಾಲೆಯಲ್ಲಿ “ವಿಶ್ವ ಪರಿಸರ ದಿನಾಚರಣೆ “ ಮೂಡಲಗಿ : “ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನಲ್ಲ” ಪ್ರಕೃತಿ ಪ್ರತಿಯೊಂದು ಜೀವರಾಶಿಯ ಆಗರವಾಗಿದ್ದು ಪ್ರಕೃತಿಯಲ್ಲಿ ಇರುವ ಹಸಿರು ಸಸ್ಯ ಸಮೂಹ ಪ್ರತಿಯೊಂದು ಜೀವರಕ್ಷಕವಾಗಿದ್ದು ಪರಿಸರವನ್ನು ಸಂರಕ್ಷಿಸುವ ಮನೋಬಾವನೆ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಮೂಡಲಗಿ ಪುರಸಭೆಯ ಮುಖ್ಯಾಧಿಕಾರಿ ತುಕಾರಾಮ್ ಮಾದರ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಆರ್.ಡಿ.ಎಸ್. ಶ್ರೀ ವಿದ್ಯಾನಿಕೇತನ ಸಿಬಿಎಸ್‍ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ …

Read More »

ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!

ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ Ukg ವಿದ್ಯಾರ್ಥಿನಿ ಕುಮಾರಿ ಭುವನಾ ಶಿವರುದ್ರಗೌಡ ದೇಯನ್ನವರ  ಜೂ.5ರಂದು ವಿಶ್ವ ಪರಿಸರ ದಿನ ಪ್ರಯುಕ್ತ ಸಸಿ ನೆಟ್ಟು ನೀರು ಹಾಕಿ ಪರಿಸರ ಪ್ರೇಮ ಮೆರದು ಎಲ್ಲರ ಗಮನ ಸೆಳೆದಳು.

Read More »

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜೂ.5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸ್ಥಳೀಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಬಿದರಿ, ಮಂಜುಳಾ ಭಜಂತ್ರಿ, ಲಕ್ಷ್ಮೀ ತಳವಾರ, ರಮೇಶ ಬೆಣ್ಣೆಪ್ಪಗೋಳ, ಸ್ಥಳೀಯ ಹಾಸ್ಟೆಲ್‍ದ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಇದ್ದರು.

Read More »

ಬೆಟಗೇರಿ ಸಿಆರ್‍ಸಿ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ ನಡೆದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಬೆಟಗೇರಿ ಸಿಆರ್‍ಸಿ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ ನಡೆದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಸಿಆರ್‍ಸಿ ವಲಯ ವ್ಯಾಪ್ತಿಯ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಕೇಂದ್ರ ಶಾಲೆಯ ಎಲ್ಲ ಸರ್ಕಾರಿ ಹಿರಿಯ ಮತ್ತು ಕಿರಿಯ ಹಾಗೂ ತೋಟದ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗಳಲ್ಲಿ ಸನ್ 2026- 27ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವ, ಪಠ್ಯ ಪುಸ್ತಕ ಮತ್ತು ಸಮವಸ್ತ್ರ …

Read More »

ಬೆಟಗೇರಿ ಹನುಮನಿಗೆ ಗುತ್ತೆ ಪೂಜೆ.!

ಬೆಟಗೇರಿ ಹನುಮನಿಗೆ ಗುತ್ತೆ ಪೂಜೆ.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಹನುಮಂತ ದೇವರಿಗೆ ಅಧಿಕ ಮಾಸದ ಪ್ರಯುಕ್ತ ಶನಿವಾರ ಮೇ.30 ರಂದು ಬೆಳಗ್ಗೆ 6 ಗಂಟೆಗೆ ಗುತ್ತೆ ಪೂಜಾ ಕಾರ್ಯಕ್ರಮ ನಡೆಯಿತು. ಬರಹ: ಅಡಿವೇಶ ಮುಧೋಳ. ಚಿತ್ರ: ಭರಮಣ್ಣ ಪೂಜೇರಿ.

Read More »

ಬೆಟಗೇರಿ ಕ್ಲಸ್ಟರ್ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ

ಬೆಟಗೇರಿ ಕ್ಲಸ್ಟರ್ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ವರದಿ: ಅಡಿವೇಶ ಮುಧೋಳ. ಬೆಟಗೇರಿ: ರಾಜ್ಯಾದ್ಯಂತ ಜೂನ್ 1ರಂದು 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳು ಪುನರಾರಂಭಗೊಳ್ಳಿರುವ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮೇ.30 ಮತ್ತು ಮೇ.31ರಂದು ಶಾಲಾ ಮಕ್ಕಳ ಬರಮಾಡಿಕೊಳ್ಳಲು ಸ್ವಚ್ಛತಾ ಕಾರ್ಯ ಸೇರಿದಂತೆ ಸಕಲ ಸಿದ್ಧತೆ ನಡೆದಿದೆ. ಬೆಟಗೇರಿ ಕ್ಲಸ್ಟರ್ ವ್ಯಾಪ್ತಿಯ ಬೆಟಗೇರಿ, ಬಿಲಕುಂದಿ, …

Read More »

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

ಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಸ್ವಾಗತ *ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ ಬೆಟಗೇರಿ: ವರದಿ: ಅಡಿವೇಶ ಮುಧೋಳ. ಬೆಟಗೇರಿ: ರಾಜ್ಯಾದ್ಯಂತ ಜೂನ್ 1ರಂದು 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆಗಳು ಪುನರಾರಂಭಗೊಳ್ಳಿರುವ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಬೆಟಗೇರಿ ಸಿಆರ್‍ಸಿ ವಲಯ …

Read More »

ಬೆಟಗೇರಿಯಲ್ಲಿ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ತ್ಯಾಗ ಬಲಿದಾನ ಹಾಗೂ ಸಹೋದರತ್ವದ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವನ್ನು ಮೇ.28ರಂದು ಸ್ಥಳೀಯ ಮುಸ್ಲಿಂ ಸಮುದಾಯದವರು ಭಕ್ತಿಭಾವ, ಸಂಭ್ರಮದಿಂದ ಆಚರಿಸಿದರು. ಇಲ್ಲಿಯ ಮುಸ್ಲಿಂ ಸಮಾಜದವರು ಬಕ್ರೀದ್ ಹಬ್ಬದ ಪ್ರಯುಕ್ತ ಮೇ.28ರಂದು ಮುಂಜಾನೆ 8:30 ಗಂಟೆಗೆ ಅಲ್ಲಾನ ನಾಮಸ್ಮರಣೆ ಮಾಡುತ್ತಾ ಸ್ಥಳೀಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸರ್ವರಿಗೂ ಶಾಂತಿ, ಸೌಹಾರ್ದತೆ ಹಾಗೂ ನೆಮ್ಮದಿ ಮತ್ತು ಸಮೃದ್ಧಿ ದಯಪಾಲಿಸಲಿ ಎಂದು ಬೇಡಿಕೊಂಡ ಬಳಿಕ …

Read More »

ಶಾಲಾ ಮಕ್ಕಳು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು: ಬಸವರಾಜ ಪಣದಿ

ಬೆಟಗೇರಿ:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಶಾಲಾ ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.18 ರಿಂದ ಮೇ.24 ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ …

Read More »