Breaking News
Home / inmudalgi

inmudalgi

ನೂತನವಾಗಿ ನಿರ್ಮಿಸಿರುವ ನಾಡ ಕಚೇರಿಯನ್ನು ಉದ್ಘಾಟಿಸಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

*ಕೌಜಲಗಿ.* (ತಾ.ಗೋಕಾಕ) ಕೌಜಲಗಿ ಭಾಗದ ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲು ನಾಡ ಕಚೇರಿಯನ್ನು ಸ್ವಂತ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ, ಇಲ್ಲಿನ ಬಸ್ ನಿಲ್ದಾಣದ ಬಳಿ (ಅಂಬೇಡ್ಕರ್ ವೃತ್ತ ಹತ್ತಿರ) 20 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ನಾಡ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ಇದರ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಈ ಭಾಗದ ಜನಪ್ರಿಯ ಶಾಸಕರಾದ …

Read More »

ಅಕ್ಷತಾ ಖಣದಾಳೆ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೂಡಲಗಿ : ಮೂಡಲಗಿಯ ವಿಬಿಎಸ್‍ಎಂ ಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿನಿಯನ್ನು ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾದ್ಯರಾದ ಸಂಗಮೇಶ ಹಳ್ಳೂರ ಮಾರ್ಗದರ್ಶಕರಾದ ಪ್ರಕಾಶ ಹುಣಶೀಗಿಡದ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.  

Read More »

ನ.22ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ನ.22ರಿಂದ ನ.23 ರವರೆಗೆ ನಡೆಯಲಿವೆ. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಗೋಸಬಾಳ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನ.22ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಜಾಗೃತ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಹೋಮ, …

Read More »

ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ

ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಬುಧವಾರ ನ-19 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ …

Read More »

ನ. 20ರಂದು ಅರಭಾವಿ ಮಠದಲ್ಲಿ ಶಿವಾನುಭವ ಗೋಷ್ಠಿ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ನ.20ರಂದು ಸಂಜೆ 6.30ಕ್ಕೆ ಅಮವಾಸ್ಯೆಯ ಶಿವಾನುಭವ ಗೋಷ್ಠಿಯು ಜರುಗಲಿದೆ. ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕ ಸರ್ಕಾರಿ ಪ್ರೌಢ ಶಾಲೆಯ ತವನಪ್ಪ ಬಿಲ್ ‘ನಿಜ ರಾಷ್ಟ್ರ ನಿರ್ಮಾತೃ ಅನ್ನದಾತ’ ವಿಷಯ ಕುರಿತು ಉಪನ್ಯಾಸ ನೀಡುವರು. ಹಾರೂಗೇರಿಯ ಇಂಚಗೇರಿ ಮಠದ ಪೀಠಾಧಿಪತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ಕರ್ನಾಟ ರಾಜ್ಯ …

Read More »

ಮೂಡಲಗಿ ರಾಯಲ್ಸ್ ಚಾಲೆಂಜರ್ಸ್‍ಗೆ ‘ಎಂಪಿಎಲ್-2025’ ಕ್ರಿಕೆಟ್ ಟ್ರೋಪಿ

ಮೂಡಲಗಿ: ಇಲ್ಲಿಯ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿದ್ದ ‘ಎಂಪಿಎಲ್-2025’ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ರಾಯಲ್ ಚಾಲೆಂಜರ್ಸ ತಂಡವು ಚಾಂಪಿಯಿನ್‍ಷಿಪ್‍ದೊಂದಿಗೆ ರೂ. 50,001 ನಗದು ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿ ಸೂಪರ್ ಕಿಂಗ್ಸ್ ತಂಡವು ರೂ.30,001 ಹಾಗೂ ಟ್ರೋಪಿ ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಮೂಡಲಗಿ ರಾಯಲ್ಸ್ ತಂಡವು ರೂ.20,001 ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ತಂಡದ ನಾಯಕರಾದ …

Read More »

ರೈತರು ಸಾವಯವ ಕೃಷಿಯ ಮೂಲಕ ಭೂಮಿಯ ಫಲವತ್ತತೆ ಕಾಯಬೇಕು’- ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ

ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು ಅವಶ್ಯವಿದೆ’ ಎಂದು ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಾಳಪ್ಪ ಬಿ. ಬೆಳಕೂಡ ಅವರ ತೊಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದವರ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ ಹಾಗೂ …

Read More »

ಹಳ್ಳಿಗಳಲ್ಲಿ ನಮ್ಮ ಪರಂಪರೆ ಮತ್ತು ಸಂಸ್ಕøತಿ ಸಂಪ್ರದಾಯ ಉಳಿದಿದೆ ಪ್ರಾಚಾರ್ಯ ಟಿ.ಎಸ್.ಒಂಟಗೊಡಿ

ಮೂಡಲಗಿ : ನಮ್ಮ ಹಳ್ಳಿಗಳಲ್ಲಿ ಮಾತ್ರ ಪರಂಪರೆ ಮತ್ತು ಸಂಸ್ಕøತಿ ಸಂಪ್ರದಾಯ ಉಳಿದಿದೆ. ಇಂದು ನಗರೀಕರಣ ಜೀವನದಿಂದ ನಮ್ಮ ಸಂಪ್ರದಾಯ ಸಂಸ್ಕøತಿ ನಶಿಸಿ ಹೋಗುತ್ತಿದ್ದು ಇಂದಿನ ವಿದ್ಯಾರ್ಥಿಗಳು ಆಧುನಿಕ ಜೀವನಕ್ಕೆ ಬೇಗನೆ ಹೊಂದಿಕೊಳ್ಳುತ್ತಿದ್ದು ಗ್ರಾಮೀಣ ಜನರ ಜೀವನ ಪದ್ದತಿ, ಹಬ್ಬ ಹರಿದಿನಗಳಲ್ಲಿ ಬಳಸುವ ಆಹಾರ, ಕೃಷಿಯಲ್ಲಿ ಅನುಸರಿಸುವ ಉದ್ಯೋಗಗಳು ಅವರ ಉಡುಗೆ-ತೊಡಿಗೆ ವೇಷ ಭೂಷಣಗಳು ಸಾಂಪ್ರದಾಯಿಕ ಆಚರಣೆಗಳು ಅದರಂತೆ ಕುಟುಂಬ ಪದ್ದತಿ, ಸಾಕು ಪ್ರಾಣಿಗಳ ಪ್ರೀತಿ ನಮ್ಮ ಯುವ ಸಮುದಾಯದ …

Read More »

ರಾಜ್ಯ ಮಟ್ಟದ ಕವಿಗೋಷ್ಠಿಗೆ ಬಾಳೇಶ ಫಕ್ಕೀರಪ್ಪನವರ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಆಂಗ್ಲ ಭಾಷಾ ಶಿಕ್ಷಕ, ಉದಯೋನ್ಮುಖ ಬರಹಗಾರ ಬಾಳೇಶ ಬಸವರಾಜ ಫಕ್ಕೀರಪ್ಪನವರ(ತಡಕೋಡ)ಅವರು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇದೇ ನ.23 ರಂದು ಬೈಲಹೊಂಗಲ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ ಎಂದು ಕವಿಗೋಷ್ಠಿಯ ಮುಖ್ಯ ಸಂಯೋಜಕ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ …

Read More »

ಸರಕಾರಿ ಶಾಲೆಗಳ ಸೌಲಭ್ಯ ಪಡೆದು ಭವಿಷ್ಯ ನಿರ್ಮಿಸಿಕೊಳ್ಳಿ : ಸೇವಂತಿ ಹಿರೇಹೊಳಿ

ಮೂಡಲಗಿ 14: ಸರಕಾರಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಭವಿಷ್ಯ ನಿರ್ಮಿಸಿಕೊಳ್ಳುವದು ಅವಶ್ಯಕವಾಗಿದೆ ಎಂದು 8 ನೇ ತರಗತಿಯ ವಿದ್ಯಾರ್ಥಿನಿ ಸೇವಂತಿ ಹಿರೇಹೊಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಇಂದು ಸರಕಾರಿ ಶಾಲೆಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಹೀಗಿರುವಾಗ ವಿದ್ಯಾರ್ಥಿಗಳ ಕಲಿಕೆಗೆ ನಮ್ಮ ಬಡತನ ಅಡ್ಡಿಯಾಗುವದಿಲ್ಲ ಸರಕಾರಿ …

Read More »