ಗೋಕಾಕ್- ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇಡೀ ದೇಶವೇ ಮೆಚ್ಚುವ ರೀತಿಯಲ್ಲಿ ನೂರಾರು ಅಭಿವೃದ್ಧಿ ಪರ ಯೋಜನೆಗಳನ್ನು ಸಾಕಾರಗೊಳಿಸುವ ಮೂಲಕ ನಮ್ಮ ಭಾರತದ ಚಿತ್ರಣವನ್ನೇ ಬದಲಾಯಿಸಿ ಹೊಸ ಭಾಷ್ಯ ಬರೆದಿದ್ದರು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಬಸಗೌಡ ಪಾಟೀಲ (ಮೆಳವಂಕಿ) ಹೇಳಿದರು. ಗುರುವಾರ, ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸುಶಾಸನ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ …
Read More »ರಾಜ್ಯದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ: ಮಂಗಳೂರು ಎ.ಆರ್.ಓ ಅಗ್ನಿವೀರ ಉಚಿತ ಫಿಸಿಕಲ್ ತರಬೇತಿ
ಮೂಡಲಗಿ: ಮುಂದೆ ನಡೆಯಲಿರುವ ಮಂಗಳೂರು ಎ.ಆರ್.ಓ. ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲಿರುವ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಸಿ.ಬಿ.ಟಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಭಾವಿ ಅಗ್ನಿವೀರರಿಗೆ ಉಚಿತ ದೈಹಿಕ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ. ಸರ್ಕಾರದಿಂದ ಮಾನ್ಯತೆ ಪಡೆದು ಯಶಸ್ವಿಯಾಗಿ 22 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಅಕಾಡೆಮಿಯಿಂದ ಇತ್ತೀಚೆಗೆ ನಡೆದ ಬೆಳಗಾವಿ ಎ.ಆರ್.ಓ. ದ ನೇಮಕಾತಿಯಲ್ಲಿ 78 ಅಭ್ಯರ್ಥಿಗಳು …
Read More »ಬೆಟಗೇರಿ: ಡಿ.27ರಂದು 28ನೇ ವರ್ಷದ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 28ನೇ ವರ್ಷದ ಓಂ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ, ಧರ್ಮಸಭೆ, ಅನ್ನಸಂತರ್ಪನೆ, ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಡಿ.27ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಅಂದು ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ 4 ಗಂಟೆಗೆ ಸುಮಂಗಲೆಯರಿಂದ …
Read More »ಡಿ.26 ಮತ್ತು 27 ರಂದು ಮುಸಗುಪ್ಪಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ
ಡಿ.೨೬ಮತ್ತು ೨೭ ರಂದು ಮುಸಗುಪ್ಪಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಮೂಡಲಗಿ: ಮೂಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಡಿ.೨೬ ಮತ್ತು ೨೭ರಂದು ಎರಡು ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮುಸಗುಪ್ಪಿ ಗ್ರಾಮದ ಗುರು-ಹಿರಿಯರು, ಎಸ್.ಡಿ.ಎಂ.ಸಿ ಪಧಾಧಿಕಾರಿಗಳು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಾಳಗೌಡ ಪಾಟೀಲ …
Read More »ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮ
ಮೂಡಲಗಿ :ರೈತ ದಿನಾಚರಣೆಯ ಅಂಗವಾಗಿ ಗೋಕಾಕ ಕೃಷಿ ಇಲಾಖೆಯ ವತಿಯಿಂದ ಆತ್ಮ (ATMA) ಯೋಜನೆ, ಗೋಕಾಕ್/ಮೂಡಲಗಿ ತಾಲೂಕು ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಎಂ.ಎನ್. ಮಳವಡಿ ಅವರು ಬೇಸಾಯ ಪದ್ಧತಿ ಮತ್ತು ಸಮಗ್ರ ಕೃಷಿ ಕ್ರಮಗಳ ಬಗ್ಗೆ, ಡಾ. ಪರಶುರಾಮ್ ಪಾಟೀಲ್ ಅವರು ಸಮಗ್ರ ಬೆಳೆ ಪದ್ಧತಿ ಹಾಗೂ ಮೌಲ್ಯವರ್ಧನೆ ಕುರಿತು, ಮತ್ತು …
Read More »ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ
ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ ಬೆಟಗೇರಿ:ನಿಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ತಪ್ಪದೇ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ರವಿವಾರ ಡಿ.21ರಂದು ನಡೆದ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತಮ್ಮ ಮಕ್ಕಳಿಗೆ …
Read More »‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’
ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಪರಿವಾರದ ಸಹಯೋಗದಲ್ಲಿ ಭಾನುವಾರ ಮಗುವಿಗೆ ಪೊಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೊಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’ ಮೂಡಲಗಿ: ಮಗುವಿಗೆ ಪಲ್ಸ್ ಪೊಲಿಯೋ ಹನಿ ಹಾಕಿ ಮಗುವಿನ ತಾಯಿಗೆ ಗುಲಾಬಿ ಹೂವು ನೀಡಿ ತಾಯಿಯನ್ನು ಅಭಿನಂದಿಸುವ ಮೂಲಕ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರಿಯ ಪಲ್ಸ್ ಪೊಲಿಯೋ …
Read More »*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*
*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ* ಮೂಡಲಗಿ : ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಕಡ್ಡಾಯವಾಗಿ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಜೈ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಹಳ್ಳೂರ ಗ್ರಾಮದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ …
Read More »ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ
ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿ ತಾಯಿಗೆ ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಶನಿವಾರ ಡಿ.20 ರಂದು ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ …
Read More »ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ
ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಧಿದೇವತೆ ಲಕ್ಷ್ಮೀದೇವಿ ದೇವಾಲಯದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ಶನಿವಾರ ಡಿ.20ರಂದು ಲಕ್ಷ್ಮೀದೇವಿ ಗದ್ದುಗೆ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆದಳು. ಚಿತ್ರ: ಭರಮಣ್ಣ ಪೂಜೇರಿ. ಶ್ರೀದೇವಿ ದೇವಾಲಯ ಅರ್ಚಕ ಬೆಟಗೇರಿ.
Read More »
IN MUDALGI Latest Kannada News